ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಂಗವಾಗಿ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕ್ವಣಗಣನೆ ಆರಂಭವಾಗಿದೆ. ಪ್ರಮಾಣವಚನ ಬೋಧನೆಗೆ ಇನ್ನು ಕೆಲವೇ ಗಂಟೆಗಳು ಬಾಕಿ ಇವೆ. ಕಳೆದ ಎರಡು ದಿನಗಳಿಂದ ನೂತನ ಸಚಿವರ ಪಟ್ಟಿ ಅಂತಿಮ ಅಂತಿಮಗೊಳಿಸಲು ಮುಖ್ಯಮಂತ್ರಿ ಯಡಿಯೂರಪ್ಪ ತೀವ್ರ ಕಸರತ್ತು ನಡೆಸುತ್ತಿದ್ದರೂ ಸಾಧ್ಯವಾಗಿಲ್ಲ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ನಿನ್ನೆ ಸಂಜೆಯೇ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದರೂ ತಡರಾತ್ರಿ 2 ಗಂಟೆಯಾದರೂ ಹೈಕಮಾಂಡ್ನಿಂದ ಗ್ರೀನ್ ಸಿಗ್ನಲ್ ಸಿಗಲೇ ಇಲ್ಲ.
ಹೀಗಾಗಿ ಬೆಳಿಗ್ಗೆ ಮತ್ತೆ ಆಪ್ತ ಸಚಿವರು, ಪುತ್ರ ಬಿ.ವೈ ವಿಜಯೇಂದ್ರ ಜತೆ ಯಡಿಯೂರಪ್ಪ ಸಮಾಲೋಚನೆ ನಡೆಸಿದ್ದಾರೆ. ಕೆಲ ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಅವರನ್ನು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬೆಂಗಳೂರಿಗೆ ಬರುವಂತೆ ಖುದ್ದು ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ದೂರವಾಣಿ ಮೂಲಕ ಕರೆ ಮಾಡಿ ತಿಳಿಸಿದ್ದಾರೆ..
ಆದರೆ, ಅರವಿಂದ ಲಿಂಬಾವಳಿ, ಮುನಿರತ್ನ, ಸಿ.ಪಿ ಯೋಗೇಶ್ವರ್ ಸೇರಿದಂತೆ ಕೆಲವರ ಹೆಸರಿಗೆ ಹೈಕಮಾಂಡ್ನಿಂದ ಅಂತಿಮ ಮುದ್ರೆ ಸಿಕ್ಕಿಲ್ಲ. ಈ ನಡುವೆ, ಕೆಲ ಶಾಸಕರು ಸಂಪುಟಕ್ಕೆ ಸೇರ್ಪಡೆಯಾಗಲು ಹೈಕಮಾಂಡ್ ಮಟ್ಟದಲ್ಲಿ ತೀವ್ರ ಲಾಬಿ ನಡೆಸುತ್ತಿರುವ ಪರಿಣಾಮ ಸಿಎಂ ಯಡಿಯೂರಪ್ಪ ಅವರಿಗೆ ಪಟ್ಟಿ ಅಂತಿಮಗೊಳಿಸಲು ಸಾಧ್ಯವಾಗಿಲ್ಲ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಮುನಿರತ್ನಗೆ ಕೈತಪ್ಪುತ್ತಾ `ಮಂತ್ರಿ’ ಪಟ್ಟ
ಆರ್.ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರಿಗೆ ಕೊನೆ ಗಳಿಗೆಯಲ್ಲಿ ಮಂತ್ರಿಪಟ್ಟ ಕೈತಪ್ಪುವ ಸಾಧ್ಯತೆ ಇದೆ. ಕಳೆದ ವರ್ಷ ನಡೆದ ಉಪಚುನಾವಣೆ ಬಹಿರಂಗ ಪ್ರಚಾರದ ವೇಳೆ ಮುನಿರತ್ನ ಸಚಿವರಾಗುತ್ತಾರೆ. ಆರ್.ಆರ್ ನಗರ ಕ್ಷೇತ್ರಕ್ಕೆ ಅಭಿವೃದ್ಧಿ ಕೆಲಸ ಮಾಡುತ್ತಾರೆ. ಮುನಿರತ್ನ ಅವರನ್ನು ಗೆಲ್ಲಿಸಿ ಕಳಿಸಿ. ನಾನು ಕೊಟ್ಟ ಮಾತಿಗೆ ತಪ್ಪಲ್ಲ ಎಂದು ಖುದ್ದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದರು.
ಉಪಚುನಾವಣೆಯಲ್ಲಿ ಭರ್ಜರಿ ಬಹುಮತದಿಂದ ಗೆದ್ದುಬಂದ ಮುನಿರತ್ನ, ಇನ್ನೇನು ಸಚಿವನಾಗುತ್ತೇನೆ ಎಂಬ ಖುಷಿಯಲ್ಲಿದ್ದರು. ಆದರೆ, ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ವಿಳಂಬ ಮಾಡಿದ ಪರಿಣಾಮ ಚುನಾವಣೆ ಗೆದ್ದಾಗ ಇದ್ದ ಖುಷಿ ಮರೆಯಾಗಿತ್ತು.
ಆದರೆ, ಸಚಿವ ಸಂಪುಟ ವಿಸ್ತರಣೆ ಎಂಬ ವಿಚಾರ ಬಂದಾಗ ಮೊದಲ ಹೆಸರು ಇದ್ದಕ್ಕೆ ಮುನಿರತ್ನ. ಆದರೆ, ನಿನ್ನೆಯಿಂದ ನಡೆಯುತ್ತಿರುವ ಬೆಳವಣಿಗೆಗಳ ಪ್ರಕಾರ ಆರ್.ಆರ್ ನಗರ ಶಾಸಕ ಮುನಿರತ್ನ ಅವರಿಗೆ ಮಂತ್ರಿ ಸ್ಥಾನ ಕೈತಪ್ಪುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿವೆ. ಮುನಿರತ್ನ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಹೈಕಮಾಂಡ್ ಒಪ್ಪಿಗೆ ಕೊಡುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.
ನಿನ್ನೆ ಸಂಜೆಯಿಂದಲೇ ಮುನಿರತ್ನ ಸಿಎಂ ಯಡಿಯೂರಪ್ಪ ಅವರ ಕಾವೇರಿ ನಿವಾಸದಲ್ಲೇ ಬೀಡು ಬಿಟ್ಟಿದ್ದಾರೆ. ತಡರಾತ್ರಿವರೆಗೂ ಮುನಿರತ್ನ ಹೆಸರು ಸೇರಿಸಲು ಯಡಿಯೂರಪ್ಪ ಎಷ್ಟೇ ಪ್ರಯತ್ನ ನಡೆಸಿದರೂ ಹೈಕಮಾಂಡ್ನಿಂದ ಒಪ್ಪಿಗೆ ಸಿಗುತ್ತಿಲ್ಲ ಎನ್ನಲಾಗಿದೆ.
ಹೀಗಾಗಿ ಇಂದು ಬೆಳಿಗ್ಗೆ 9 ಗಂಟೆಗೆ ಮುನಿರತ್ನ ಅವರನ್ನು ಮತ್ತೆ ಕರೆಸಿಕೊಂಡಿರುವ ಯಡಿಯೂರಪ್ಪ, ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ಆಗದೇ ಇರುವುದಕ್ಕೆ ಮನವೊಲಿಕೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಎಣ್ಣೆ ಮಂತ್ರಿ ಸ್ಥಿತಿ ಡೋಲಾಯಮಾನ
ಅಬಕಾರಿ ಸಚಿವ ಹೆಚ್.ನಾಗೇಶ್ ಸ್ಥಿತಿ ಇನ್ನೂ ಡೋಲಾಯಮಾನವಾಗಿದೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ರಾಜೀನಾಮೆ ನೀಡದೇ ಹೋದರೆ ಸಂಪುಟದಿಂದ ಕಿಕ್ಔಟ್ ಮಾಡುವ ಸಾಧ್ಯತೆ ಎಂಬ ಸುದ್ದಿ ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ಸಚಿವ ನಾಗೇಶ್ ಅಭಿಮಾನಿಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಹೀಗಾಗಿ ನಾಗೇಶ್ ಅವರನ್ನು ಸಂಪುಟದಲ್ಲಿ ಉಳಿಸಿಕೊಂಡು ಮುನಿರತ್ನ ಅವರನ್ನು ಸ್ವಲ್ಪ ದಿನದವರೆಗೆ ಕಾಯುವಂತೆ ಸೂಚನೆ ನೀಡುವ ಸಾಧ್ಯತೆ ಇದೆ. ಹೀಗಾಗಿ ನಾಗೇಶ್ ಸಂಜೆಯವರೆಗೆ ಕಾಯುವಂತೆ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ ಎಂದು ಖುದ್ದು ನಾಗೇಶ್ ಹೇಳಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel