ರಾಜ್ಯದಲ್ಲಿ ಲಾಕ್ ಡೌನ್ ಆಗೋದು ಪಕ್ಕಾನಾ..? ಸಿಎಂ ಹೇಳಿದ್ದೇನು..?
ಬೆಂಗಳೂರು: ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಮಹಾಮಾರಿ 2ನೇ ಅಲೆ ಜೋರಾಗಿದ್ದು, ಈಗಾಗಲೇ ರಾಜ್ಯದಲ್ಲಿ ದೈನಂದಿನ ಕೇಸ್ ಗಳ ಸಂಖ್ಯೆ 9000ದ ಸನಿಹಕ್ಕೆ ಬಂದಿದೆ. ಇತ್ತ ಸರ್ಕಾರ ನಾನಾ ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಳ್ತಿದ್ದು, ಹಲವೆಡೆ ನೈಟ್ ಕರ್ಫ್ಯೂ ವೀಧಿಸಿದೆ.
ಇತ್ತ ಲಾಕ್ ಡೌನ್ ಮಾಡೋದು ಖಚಿತ ಎಂಬ ಮಾತುಗಳು ವದಂತಿಗಳು ಹರಿದಾಡ್ತಿದ್ದು, ಇದಕ್ಕೆ ಸಿಎಂ ಬಿಎಸ್ ಯಡಿಯೂರಪ್ಪನವರು ಸ್ಪಷ್ಟನೆ ನೀಡಿದ್ದಾರೆ. ಕರೊನಾ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು. ಲಾಕ್ ಡೌನ್ ಜಾರಿ ಮಾಡದೆ ಬಿಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಅಲ್ಲದೇ ಇದೇ 18ರಂದು ಪ್ರತಿಪಕ್ಷ ನಾಯಕರ ಸಭೆ ಕರೆಯಲಾಗಿದೆ. ಸರ್ವಪಕ್ಷ ನಾಯಕರ ಸಭೆಯಲ್ಲಿ ಸಮಗ್ರ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಇನ್ನೂ ರಾಜ್ಯದ 8 ಜಿಲ್ಲೆಗಳಲ್ಲಿ ಈಗಾಗಲೇ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಅಗತ್ಯಬಿದ್ದರೆ ಒಂದೆರಡು ಜಿಲ್ಲೆಗಳಿಗೆ ನೈಟ್ ಕರ್ಪ್ಯೂ ವಿಸ್ತರಿಸುವ ಕುರಿತು ಚಿಂತನೆ ನಡೆಸಲಾಗುವುದು ಎಂದರು.
CBSE –ಪರೀಕ್ಷೆ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಶಿಕ್ಷಣ ಸಚಿವ : ಸುರೇಶ್ ಕುಮಾರ್ ಹೇಳಿದ್ದೇನು..?