ಬೆಂಗಳೂರು : ಕಳೆದ ಒಂದೂವರೆ ತಿಂಗಳಿನಿಂದ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಪರಿಣಾಮ ಅನೇಕ ವಲಯದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ದುಡಿಮೆ ಇಲ್ಲದೆ ಸಂಕಷ್ಟಕಕ್ಕೊಳಗಾಗಿರುವ ಜನರಿಗೆ ಸಿಎಂ ಯಡಿಯೂರಪ್ಪ ಅವರು ನೆರವಿಗೆ ಬಂದಿದ್ದು, ಇದಕ್ಕಾಗಿ ರೂ.1,610 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ರಾಜ್ಯದ ಆರ್ಥಿಕ ಸ್ಥಿತಿಗತಿ ಉತ್ತಮ ಇಲ್ಲದೇ ಇದ್ದರೂ ರೈತರು ಹಾಗೂ ಸಣ್ಣಪುಟ್ಟ ಉದ್ಯೋಗಸ್ಥರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಲಾಕ್ ಡೌನ್ ಪರಿಣಾಮ ಹೂ ಬೆಳೆಗಾರರು ಸಂಕಷ್ಟದಲ್ಲಿದ್ದು, ಅವರ ನೆರವಿಗಾಗಿ ಒಂದು ಹೆಕ್ಟೇರ್ ಗೆ ರೂ.25 ಸಾವಿರದಂದೆ ಪರಿಹಾರ ನೀಡಲಾಗುತ್ತದೆ. ಇದೇ ರೀತಿ ತರಕಾರಿ, ಹಣ್ಣು ಬೆಳೆಗಾರರಿಗೆ ಶೀಘ್ರದಲ್ಲಿಯೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಇನ್ನು ರಾಜ್ಯದಲ್ಲಿ ಸುಮಾರು 60,000 ಅಗಸರಿದ್ದು, ಕ್ಷೌರಿಕ ವೃತ್ತಿಯಲ್ಲಿರುವರಿಗೆ 5000 ಪರಿಹಾರವನ್ನು ಘೋಷಣೆ ಮಾಡಲಾಗಿದೆ. ನೇಕಾರರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ನೇಕಾರರ ಸಮ್ಮಾನ್ ಯೋಜನೆ ಜಾರಿಗೊಳಿಸಲಾಗಿದೆ.
ಕೈ ಮಗ್ಗ ನೇಕಾರರಿಗೆ 2000 ಪರಿಹಾರ ಘೋಷಣೆ ಮಾಡಲಾಗಿದ್ದು, ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುವುದು. ಇನ್ನು ಕಟ್ಟಡ ಕಾರ್ಮಿಕರಿಗೆ ಹೆಚ್ಚುವರಿಗೆ 3000 ಪರಿಹಾರ ಘೋಷಣೆ ಮಾಡಲಾಗಿದೆ. ಇದರಿಂದ ಒಟ್ಟು ಕಟ್ಟಡ ಕಾರ್ಮಿಕರಿಗೆ ಒಟ್ಟು ರೂ.5000 ಪರಿಹಾರ ನೀಡಿದಂತಾಗುತ್ತದೆ. ಕಾರ್ಮಿಕರು ರಾಜ್ಯದಿಂದ ಬಿಟ್ಟು ಹೊರ ಹೋಗದಿರಲು ಈ ಪರಿಹಾರ ಘೋಷಣೆ ಸಾಧ್ಯವಾಗಲಿದೆ ಎಂದು ಸಿಎಂ ತಿಳಿಸಿದ್ದಾರೆ.