ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ಲಾಕ್ಡೌನ್ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ಡೌನ್ ಮಾಡುವುದಕ್ಕೆ ಅವಕಾಶ ಕೊಡಿ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜತೆ ನಡೆದ ವಿಡಿಯೋ ಕಾನ್ಫರೆನ್ಸ್ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದ್ದಾರೆ.
ಈ ವೇಳೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಜಿಲ್ಲಾಡಳಿತವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸೂಚಿಸಿದರು.
ಲಾಕ್ಡೌನ್ ಬಗ್ಗೆ ಜಿಲ್ಲಾಧಿಕಾರಿಗಳು ನಿರ್ಧಾರ ತೆಗೆದುಕೊಳ್ಳಲು ಸಿಎಂ ಯಡಿಯೂರಪ್ಪ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅಧಿಕಾರಿಗಳು, ಜನಪ್ರತಿನಿಧಿಗಳ ಜೊತೆ ಸಭೆ ನಡೆಸಲಿದ್ದಾರೆ.
ಸಭೆಯಲ್ಲಿ ಜಿಲ್ಲೆಯಲ್ಲಿ ಲಾಕ್ಡೌನ್ ಮಾಡಬೇಕೋ ಬೇಡವೋ ಎಂಬುದರ ಬಗ್ಗೆ ಜನ ಪ್ರತಿನಿಧಿಗಳು, ಅಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿ ಒಮ್ಮತದ ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ.
ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜಕೀಯ ಲಾಭಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡುತ್ತಿದ್ದಾರೆ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ತೀವ್ರ ವಾಗ್ದಾಳಿ...








