ದೇಶಾದ್ಯಂತ ಲಾಕ್ ಡೌನ್ ಮಾಡುವ ಬಗ್ಗೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು..?
ನವದೆಹಲಿ : ನವದೆಹಲಿ : ದೇಶಾದ್ಯಂತ ಮಹಾಮಾರಿ ಕೊರೊನಾ ಆರ್ಭಟ ಜೋರಾಗಿದೆ. ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ 2ನೇ ಅಲೆ ವೇಳೆ ಹೆಚ್ಚಾಗಿದ್ದು, ಅನೇಕ ರಾಜ್ಯಗಳಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಬಗ್ಗೆ ಚರ್ಚೆಯಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಮದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಸರ್ಕಾರ ಮತ್ತೇ ದೇಶವ್ಯಾಪಿ ಲಾಕ್ಡೌನ್ ಮಾಡುವ ಚಿಂತನೆ ಮಾಡಿಲ್ಲ ಎಂದು ಹೇಳಿದ್ದಾರೆ.
ಕೊರೊನಾ ಹೆಚ್ಚುತ್ತಿರುವ ಬೆನ್ನಲ್ಲೇ ನಿರ್ಮಲಾ ಸೀತಾರಾಮನ್ ಸೂಕ್ಷ್ಮ, ಸಣ್ಣ ಮಧ್ಯ ಉದ್ದಿಮೆಗಳ ಅಧ್ಯಕ್ಷ ಅನಿಮೇಶ್ ಸಕ್ಸೇನಾರೊಂದಿಗೆ ಮಾತಕತೆ ನಡೆಸಿದ್ದಾರೆ. ರಾಷ್ಟ್ರಾದ್ಯಂತ ಲಾಕ್ಡೌನ್ ಮಾಡುವ ಯೋಜನೆ ಇಲ್ಲ ಎಂದು ಉದ್ಯಮ ಕ್ಷೇತ್ರಕ್ಕೆ ಭರವಸೆ ನೀಡಿದ್ದಾರೆ. ಪ್ರಧಾನ ಮತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಎಲ್ಲಾ ರಾಜ್ಯಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ಆಕ್ಸಿಜನ್ ಲಭ್ಯತೆ ಸಂಬಂಧಿಸಿದಂತೆ ಪರಿಸ್ಥಿತಿಯನ್ನ ಅವಲೋಕಿಸುತ್ತಿದ್ದಾರೆ ಎಂದು ಅನಿಮೇಶ್ ಸಕ್ಸೇನಾ ಅವರು ಹೇಳಿದ್ದಾರೆ.
ಮಡಿಕೇರಿ | ಥಿಯೇಟರ್ ಗಳತ್ತ ಮುಖ ಮಾಡದ ಪ್ರೇಕ್ಷಕರು
‘ನನ್ನ ಶಾಪ ನಿಮಗೆ ಕೊನೆಯವರೆಗೂ ನೋವು ಕೊಡಲಿ , ಕೊರೊನಾ ಕಳುಹಿಸಿದ ಯಡಿಯೂರಪ್ಪ-ವಿಜಯೇಂದ್ರಗೆ ಧನ್ಯವಾದ’ – ಗುರುಪ್ರಸಾದ್