ಇಂದಿನಿಂದ ಜುಲೈ 5 ರವರೆಗೆ ದಕ್ಷಿಣ ಕನ್ನಡದಲ್ಲಿ ಏನಿದೆ? ಏನಿಲ್ಲ?
ದಕ್ಷಿಣಕನ್ನಡದಲ್ಲಿ ಲಾಕ್ಡೌನ್ ಸಡಿಲಿಕೆ ಮಾಡಲಾಗಿದ್ದು, ಜಿಲ್ಲಾಡಳಿತವು ಹೊಸ ಮಾರ್ಗಸೂಚಿ ಕ್ರಮಗಳ ಆದೇಶ ಹೊರಡಿಸಿದೆ. ಈ ಆದೇಶವು ಜೂನ್ 23 ರಿಂದ ಜುಲೈ 5 ರವರೆಗೆ ಜಾರಿಯಲ್ಲಿರುತ್ತದೆ.
ಸೋಮವಾರದಿಂದ ಶುಕ್ರವಾರದವರೆಗೆ 50% ಸಾಮರ್ಥ್ಯದೊಂದಿಗೆ ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ರವರೆಗೆ ಬಸ್ಸುಗಳು ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ. ಪ್ರಯಾಣಿಸುವಾಗ ಪ್ರಯಾಣಿಕರಿಗೆ ಬಸ್ಸಿನೊಳಗೆ ನಿಲ್ಲಲು ಅವಕಾಶವಿರುವುದಿಲ್ಲ. ವಾರಾಂತ್ಯದಲ್ಲಿ ಕರ್ಫ್ಯೂ ಜಾರಿಯಲ್ಲಿರಲಿದ್ದು, ಬಸ್ಗಳಿಗೆ ಸಂಚರಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಡಿಸಿ ಅಧಿಕೃತ ಆದೇಶದಲ್ಲಿ ತಿಳಿಸಿದ್ದಾರೆ.
ಆದೇಶದ ಪ್ರಕಾರ, ವಾರದ ದಿನಗಳಲ್ಲಿ ರಾತ್ರಿ 7 ರಿಂದ ಬೆಳಿಗ್ಗೆ 7 ರವರೆಗೆ ರಾತ್ರಿ ಕರ್ಫ್ಯೂ ಮತ್ತು ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 7 ರವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರಲಿದೆ.
ಜೂನ್ 23 ರಿಂದ ಜುಲೈ 5 ರವರೆಗೆ ಎಲ್ಲಾ ಅಂಗಡಿಗಳು (ಹವಾನಿಯಂತ್ರಿತ ಅಂಗಡಿಗಳು, ಮಾಲ್ಗಳು ಅಥವಾ ಸಂಕೀರ್ಣಗಳನ್ನು ಹೊರತುಪಡಿಸಿ) ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ರವರೆಗೆ ತೆರೆದಿರಬಹುದು ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ. ಆದರೆ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಅಂಗಡಿಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಉದ್ಯಾನವನಗಳು ಬೆಳಿಗ್ಗೆ 5 ರಿಂದ ಬೆಳಿಗ್ಗೆ 10 ರವರೆಗೆ ತೆರೆದಿರುತ್ತವೆ ಮತ್ತು ಇದನ್ನು ವಾಕಿಂಗ್ ಮತ್ತು ಜಾಗಿಂಗ್ ಉದ್ದೇಶಗಳಿಗಾಗಿ ಮಾತ್ರ ಬಳಸಬಹುದು ಮತ್ತು ಗುಂಪು ಚಟುವಟಿಕೆಗಳನ್ನು ನಡೆಸಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮಂಗಳೂರು ನಿಗಮದ ಆಯುಕ್ತರು, ಸ್ಥಳೀಯ ಸಂಸ್ಥೆಗಳ ಮುಖ್ಯ ಅಧಿಕಾರಿ ಅಥವಾ ಸಂಬಂಧಪಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ಪೂರ್ವಾನುಮತಿ ಪಡೆದ ನಂತರ ಈಗಾಗಲೇ ಯೋಜಿಸಲಾಗಿರುವ ವಿವಾಹಗಳಂತಹ ಕಾರ್ಯಕ್ರಮಗಳನ್ನು ನಡೆಸಬಹುದು. ಆದರೆ ನಿಕಟ ಸಂಬಂಧಿಗಳು ಸೇರಿದಂತೆ 25 ಮಂದಿ ಮಾತ್ರ ಭಾಗವಹಿಸಬಹುದು.
ಮೇಲಿನ ನಿರ್ಬಂಧಗಳ ಜೊತೆಗೆ, ಧಾರ್ಮಿಕ ಪೂಜಾ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧವಿರುತ್ತದೆ.
ಮೇಲಿನ ಆದೇಶಗಳನ್ನು ಉಲ್ಲಂಘಿಸುವವರು ವಿಪತ್ತು ನಿರ್ವಹಣಾ ಕಾಯ್ದೆ 2005, ಸೆಕ್ಷನ್ 51 ರಿಂದ 60, ಐಪಿಸಿ ಸೆಕ್ಷನ್ 188 ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗ ಕಾಯ್ದೆ 2020, ಸೆಕ್ಷನ್ 4, 5 ಮತ್ತು 10 ರ ಅಡಿಯಲ್ಲಿ ಕ್ರಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
ರಕ್ತ ಹೆಪ್ಪುಗಟ್ಟುವಿಕೆ/ ಥ್ರಂಬೋಸಿಸ್ ಎಂದರೇನು? ಕೋವಿಡ್ ರೋಗಿಗಳಿಗೆ ಇದು ಹೇಗೆ ಅಪಾಯಕಾರಿ?#Saakshatvhealthtips #bloodclotting #thrombosis https://t.co/lGBBNqECko
— Saaksha TV (@SaakshaTv) June 21, 2021
ಮಾವಿನ ಎಲೆಗಳ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳು#Saakshatv #healthtipsbenefits #mangoleaves https://t.co/aDEOrNCvat
— Saaksha TV (@SaakshaTv) June 22, 2021
ಕುಂಬಳಕಾಯಿ ಸಿಪ್ಪೆಯ ಚಟ್ನಿ#Saakshatv #cookingrecipe #chutney https://t.co/WNYoO3giym
— Saaksha TV (@SaakshaTv) June 21, 2021
ಲಸಿಕೆ ಪಡೆಯುವ ಮೊದಲು/ನಂತರ ಗಮನದಲ್ಲಿರಿಸಿಕೊಳ್ಳಬೇಕಾದ ವಿಷಯಗಳು#vaccinated https://t.co/cexv6VVMQa
— Saaksha TV (@SaakshaTv) June 22, 2021
#Lockdown #relaxation #newguidelines #Mangalore