ಆರ್ಥಿಕ ನೆರವು ನೀಡಿ ಲಾಕ್ಡೌನ್ Lockdown ಮಾಡಿ : ಸೋಮಶೇಖರ್ ರೆಡ್ಡಿ
ಬಳ್ಳಾರಿ : ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಬಡವ- ಬಲ್ಲಿದ ಕುಟುಂಬಗಳಿಗೆ ಸೂಕ್ತ ಆರ್ಥಿಕ ನೆರವು ನೀಡಿ ಬಳಿಕ ಲಾಕ್ಡೌನ್ ಮಾಡುವುದು ಸೂಕ್ತ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ರಾಜ್ಯದಲ್ಲಿ ಕೊರೊನಾ ಕಫ್ರ್ಯೂ ಜಾರಿಯಲಿದ್ದು, ಸಮರ್ಪಕವಾಗಿ ಜಾರಿಯಾಗಿಲ್ಲ.
ಇದರಿಂದಲೇ ಕೊರೊನಾ ಎರಡನೇ ಅಲೆ ತಡೆಯೋಕೆ ಸಾಧ್ಯವಾಗುತ್ತಿಲ್ಲ.
ಮಹಾಮಾರಿ ಕೊರೊನಾ ಎರಡನೇ ಅಲೆಯ ಸಂಪೂರ್ಣ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರ ಎಂದು ತಜ್ಞರು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ತಿಳಿಸಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ಲಾಕ್ಡೌನ್ ಅನಿವಾರ್ಯ ಆಗಿದೆ. ಅದಕ್ಕಿಂತಲೂ ಮುಖ್ಯವಾಗಿ ಬಡವ-ಬಲ್ಲಿದ ಕುಟುಂಬಸ್ಥರಿಗೆ ಆರ್ಥಿಕ ನೆರವು ನೀಡಬೇಕಿದೆ.
ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಚಿಂತನೆ ನಡೆಸಬೇಕಿದೆ ಎಂದು ಅಭಿಪ್ರಾಯಪಟ್ಟರು.