ಲೂಟಿಯೇ ಬಿಜೆಪಿ ಧರ್ಮ!
ಬೆಂಗಳೂರು : ಈ ದಶಕದ ಅತಿದೊಡ್ಡ ಹಗರಣ ಪಿಎಂ ಕೇರ್ ಫಂಡ್ ಬಗ್ಗೆ ಯಾಕೆ ತುಟಿ ಬಿಚ್ಚುವುದಿಲ್ಲ ಎಂದು ಬಿಜೆಪಿಯನ್ನು ರಾಜ್ಯ ಕಾಂಗ್ರೆಸ್ ಪಕ್ಷ ಪ್ರಶ್ನೆ ಮಾಡಿದೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಮಂಗಳವಾರ 2ನೇ ದಿನದ ವಿಚಾರಣೆಗೆ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದು, ವಿಚಾರಣೆ ಮುಂದುವರೆದಿದೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಮುಂದುವರೆಸಿದೆ.
ಈ ನಡುವೆ ಬಿಜೆಪಿ ವಿರುದ್ಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಮುಗಿದಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಮುನ್ನೆಲೆಗೆ ತಂದು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟಿರುವ ಬಿಜೆಪಿ, ಈ ದಶಕದ ಅತಿದೊಡ್ಡ ಹಗರಣ ಪಿಎಂ ಕೇರ್ ಫಂಡ್ ಬಗ್ಗೆ ಯಾಕೆ ತುಟಿ ಬಿಚ್ಚುವುದಿಲ್ಲ? ED ನೋಟಿಸ್ ನರೇಂದ್ರ ಮೋದಿ, ಅಮಿತ್ ಶಾ ಅವರಿಗೆ ಯಾವಾಗ ತಲುಪಲಿದೆ? ಜನರ ಹಣದ ಸರಿಯಾದ ಲೆಕ್ಕ ಯಾವಾಗ ಬಹಿರಂಗ ಪಡಿಸುತ್ತೀರಿ?
ರಫೆಲ್ ಹಗರಣ – ಮುಚ್ಚಿ ಹಾಕಲಾಗುತ್ತದೆ, ಫೈಲ್ಗಳು ಕಳೆದುಹೋಗುತ್ತವೆ! ಪಿಎಂ ಕೇರ್ಸ್ ಹಗರಣ – ತನಿಖೆಯೇ ನಡೆಯುವುದಿಲ್ಲ, ಜನರ ಹಣ ಲೂಟಿ ಹೊಡೆಯಲಾಗುತ್ತದೆ! ಶವಪೆಟ್ಟಿಗೆ ಹಗರಣ – ಪ್ರಮುಖ ಆರೋಪಿಗಳನ್ನು ಬಚಾವು ಮಾಡಲಾಗುತ್ತದೆ! ಸಿಎಂ ಹುದ್ದೆಗೆ ₹2500 ಕೋಟಿ – ತನಿಖೆಯೇ ಆಗುವುದಿಲ್ಲ! ಲೂಟಿಯೇ ಬಿಜೆಪಿ ಧರ್ಮ!
ರಫೆಲ್ ಹಗರಣ – ಮುಚ್ಚಿ ಹಾಕಲಾಗುತ್ತದೆ, ಫೈಲ್ಗಳು ಕಳೆದುಹೋಗುತ್ತವೆ!
ಪಿಎಂ ಕೇರ್ಸ್ ಹಗರಣ – ತನಿಖೆಯೇ ನಡೆಯುವುದಿಲ್ಲ, ಜನರ ಹಣ ಲೂಟಿ ಹೊಡೆಯಲಾಗುತ್ತದೆ!
ಶವಪೆಟ್ಟಿಗೆ ಹಗರಣ – ಪ್ರಮುಖ ಆರೋಪಿಗಳನ್ನು ಬಚಾವು ಮಾಡಲಾಗುತ್ತದೆ!
ಸಿಎಂ ಹುದ್ದೆಗೆ ₹2500 ಕೋಟಿ – ತನಿಖೆಯೇ ಆಗುವುದಿಲ್ಲ!
ಲೂಟಿಯೇ ಬಿಜೆಪಿ ಧರ್ಮ!#IndiaWithRahulGandhi
— Karnataka Congress (@INCKarnataka) June 14, 2022
ಬಿಜೆಪಿ ಸರ್ಕಾರದ ವಿರುದ್ಧ ಹೋರಾಟವು ಮತ್ತೊಮ್ಮೆ ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ದದ ಹೋರಾಟವನ್ನು ನೆನಪಿಸುತ್ತಿದೆ.ಹೋರಾಡುತ್ತೇವೆ, ದೇಶವನ್ನು ಫ್ಯಾಸಿಸ್ಟ್ ಶಕ್ತಿಗಳಿಂದ ಮುಕ್ತಗೊಳಿಸುತ್ತೇವೆ, ಆ ಬದ್ಧತೆ ನಮಗಿದೆ,ಜನಪ್ರತಿನಿಧಿಗಳೊಂದಿಗೆ ಪೊಲೀಸರ ಈ ನಡವಳಿಕೆ ಪ್ರಜಾಪ್ರಭುತ್ವವನ್ನು ಅಣಕಿಸುವಂತಿದೆ ಎಂದು ಕಾಂಗ್ರೆಸ್ ಬರೆದುಕೊಂಡಿದೆ. Loot is BJP’s religion karnataka congress tweet








