ಪ್ರೀತಿ ನಿರಾಕರಿಸಿದ ಯುವತಿಯನ್ನು ಕೊಲೆ ಮಾಡಿ ನಂತರ ಯುವಕನ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡಿದಿದೆ.
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 18 ವರ್ಷದ ಅರ್ಚನಾ ಎಂಬ ಯುವತಿಯೇ ಕೊಲೆಯಾದ ದುರ್ದೈವಿ. ಪ್ರಭಾಕರ್ ವಾಘರೆ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಅರ್ಚನಾಳ ಹಿಂದೆ ಪ್ರಭಾಕರ್ ಪ್ರೀತ್ಸೆ ಪ್ರೀತ್ಸೆ ಎಂದು ಬೆನ್ನು ಬಿದ್ದಿದ್ದ. ಆದರೆ, ಯುವತಿ ಮಾತ್ರ ಆತನ ಪ್ರೇಮ ನಿವೇದನೆ ಒಪ್ಪಿಕೊಂಡಿರಲಿಲ್ಲ. ಹೀಗಾಗಿ ಸೇಡು ತೀರಿಸಿಕೊಳ್ಳಬೇಕೆಂದು ನಿರ್ಧರಿಸಿದ್ದ. ಹೇಗಾದರೂ ಮಾಡಿ ಅರ್ಚನಾಳನ್ನು ಕೊಲೆ ಮಾಡಬೇಕೆಂದು ತೀರ್ಮಾನಿ ಕತ್ತು ಸೀಳಿದ್ದಾನೆ ಎಂದು ತಿಳಿದು ಬಂದಿದೆ.
ಅರ್ಚನಾ ತನ್ನ ಸಹಪಾಠಿಯೊಂದಿಗೆ ಕಾಲೇಜಿಗೆ ತೆರಳುವಾಗಿ ಆಕೆಯ ಮೇಲೆ ದಾಳಿ ನಡೆಸಿದ ಪ್ರಭಾಕರ್, ಆಕೆಯ ಕತ್ತು ಸೀಳಿ, ಪರಾರಿಯಾಗಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಅರ್ಚನಾ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಅರ್ಚನಾ ಸಾವನ್ನಪ್ಪಿದ ಕೆಲವೇ ಗಂಟೆಗಳಲ್ಲಿ ಪ್ರಭಾಕರ್ ಕೂಡ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಪಾಲ್ಘರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.