Lovers Commit Suicide : ಒಂದೇ ನೇಣಿನ ಕುಣಿಕೆಗೆ ಕೊರಳೊಡ್ಡಿ ಪ್ರೇಮಿಗಳು ಆತ್ಮಹತ್ಯೆ
ಒಂದೇ ನೇಣಿನ ಕುಣಿಕೆಗೆ ಕೊರಳೊಡ್ಡಿ ಪ್ರೇಮಿಗಳು ಆತ್ಮಹತ್ಯೆ
ಚಿಕ್ಕಮಗಳೂರಿನ ಆಲ್ದೂರಿನಲ್ಲಿ ಘಟನೆ
ಗುಲ್ಲನ್ ಪೇಟೆಯ ಸತ್ತಿಹಳ್ಳಿಯ ಅರಣ್ಯ ಪ್ರದೇಶದಲ್ಲಿ ಘಟನೆ
ದರ್ಶನ್ , ಪೂರ್ವಿಕ ಆತ್ಮಹತ್ಯೆಗೆ ಶರಣು
ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಚಿಕ್ಕಮಗಳೂರು : ಪ್ರೇಮಿಗಳಿಬ್ಬರು ಒಂದೇ ನೇಣಿನ ಕುಣಿಕೆಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ..
ಒಂದೇ ನೇಣಿನ ಕುಣಿಕೆಗೆ ಕೊರಳೊಡ್ಡಿ ಆತ್ಮಹತ್ಯೆಗೆ ಮಾಡಿಕೊಂಡಿರೋದರಿಂದ ಇಬ್ಬರೂ ಪ್ರೇಮಿಗಳಿರಬೇಕೆಂದು ಶಂಕಿಸಲಾಗಿದೆ.. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದ್ರೂ , ತಾವು ದೂರವಾಗುವ ಭೀತಿಯಿಂದ ಈ ರೀತಿ ಆತ್ಮಹತ್ಯೆಗೆ ಶರಣಾಗಿರಬಹುದೆಂದು ಅಂದಾಜಿಸಲಾಗಿದೆ..
ಆಲ್ದೂರು ಸಮೀಪದ ಗುಲ್ಲನ್ ಪೇಟೆಯ ಸತ್ತಿಹಳ್ಳಿಯ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಮೃತರಿಬ್ಬರು 23 ವರ್ಷದವರಿರಬಹುದೆಂದು ಅಂದಾಜಿಸಲಾಗಿದೆ.
ಮೃತ ಯುವಕನನ್ನು ತಾಲೂಕಿನ ಕಲ್ಲುಗುಡ್ಡೆ ಸಮೀಪದ ಆಣೂರಿನ ದರ್ಶನ್ ಹಾಗೂ ಯುವತಿಯನ್ನು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹಾನ್ಬಾಳು ಮೂಲದ ಪೂರ್ವಿಕಾ ಎಂದು ಗುರುತಿಸಲಾಗಿದೆ.
ದರ್ಶನ್ ಚಿಕ್ಕಮಗಳೂರಿನಲ್ಲಿದ್ದ, ಪೂರ್ವಿಕಾ ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದಳು ಎಂಬ ಮಾಹಿತಿ ಸಿಕ್ಕಿದೆ..
ದುಪಟ್ಟಾದ ಒಂದು ತುದಿಗೆ ಯುವತಿ ಕೊರಳೊಡ್ಡಿದ್ದರೆ, ಮತ್ತೊಂದು ತುದಿಗೆ ಯುವಕ ನೇಣು ಬಿಗಿದುಕೊಂಡಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಆಲ್ದೂರು ಪೊಲೀಸರು ಮೃತದೇಹಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ..
ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.