ಕೇರಳದಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿರುವ ಶರೋನ್ ರಾಜ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಗ್ರೀಷ್ಮಾಳನ್ನು ಬೇರೊಂದು ಜೈಲಿಗೆ ಸ್ಥಳಾಂತರ ಮಾಡಲಾಗಿದೆ.
ಬಂಧನದ ಆರಂಭದಲ್ಲೇ ಪೊಲೀಸ್ ಠಾಣೆಯಲ್ಲಿಯೇ ವಿಷ ಕುಡಿದು ಭಾರೀ ಹೈಡ್ರಾಮಾ ಮಾಡಿದ್ದಳು. ಹೀಗಾಗಿ ಜಾಮೀನಿನ ಬಿಡುಗಡೆ ಮಾಡುವುದು ತುಂಬಾ ಅಪಾಯಕಾರಿ ಎಂದು ನ್ಯಾಯಾಲಯವೇ ಅಭಿಪ್ರಾಯಪಟ್ಟಿದೆ. ಕೇರಳದ ತಿರುವನಂತಪುರದಲ್ಲಿ ಇತ್ತೀಚೆಗೆ ರೇಡಿಯೋಲಜಿ ವಿದ್ಯಾರ್ಥಿ ಶರೋನ್ ರಾಜ್ ಸಾವನ್ನಪ್ಪಿದ್ದ. ಆತನ ಪ್ರೇಯಸಿ ಗ್ರೀಷ್ಮಾಳನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆ ನಡೆಸಿದ್ದರು. ಸಾಕಷ್ಟು ವಿಚಾರಣೆ ನಂತರ, ವಿಷವುಣಿಸಿ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಳು.
ಶರೋನ್ ರಾಜ್ನನ್ನು ತನ್ನ ಮನೆಗೆ ಕರೆಸಿಕೊಂಡ ಗ್ರೀಷ್ಮಾ, ಆಯುರ್ವೇದದ ಔಷಧಿಯಲ್ಲಿ ಕ್ರಿಮಿನಾಶಕವನ್ನು ಬೆರೆಸಿ ಕುಡಿಸಿದ್ದಳು. ಗ ವಿಪರೀತ ವಾಂತಿ ಮಾಡಿಕೊಂಡಿದ್ದ ರಾಜ್, ತನ್ನ ಸ್ನೇಹಿತನೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವು-ಬದುಕಿನ ನಡುವೆ ಹೋರಾಡಿ ಸಾವನ್ನಪ್ಪಿದ್ದ. ಗ್ರೀಷ್ಮಾ 2022ರ ಮಾರ್ಚ್ 4ರಂದು ಯೋಧನೊಬ್ಬನ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಆ ನಂತರ ಶರೂನ್ ಜತೆ ಸಂಬಂಧ ಕಡಿದುಕೊಂಡಿದ್ದಳು. ಆದರೆ, ಮೇ ತಿಂಗಳಲ್ಲಿ ಶರೂನ್ ಮತ್ತೆ ಗ್ರೀಷ್ಮಾಗೆ ಹತ್ತಿರವಾಗಿದ್ದ. ನವೆಂಬರ್ನಲ್ಲಿ ಶರೋನ್ ಅವರ ಮನೆಯಲ್ಲಿ ಮತ್ತು ನಂತರ ವೆಟ್ಟುಕಾಡ್ ಚರ್ಚ್ನಲ್ಲಿ ವಿವಾಹವಾಗಿದ್ದರು.
ಇದಾದ ಬಳಿಕ ಥ್ರಿಪ್ಪರಪುವಿನಲ್ಲಿ ರೂಮ್ ಬುಕ್ ಮಾಡಿ ಇಬ್ಬರು ಲೈಂಗಿಕ ಕ್ರಿಯೆ ನಡೆಸಿದರು. ಯೋಧನ ಜತೆ ತನ್ನ ಮದುವೆ ದಿನ ಹತ್ತಿರ ಬರುತ್ತಿದ್ದಂತೆ ಶರೂನ್ನಿಂದ ದೂರವಾಗಲು ಗ್ರೀಷ್ಮಾ ಮುಂದಾಗಿದ್ದಳು. ಲವ್ ಬ್ರೇಕಪ್ ಮಾಡಿಕೊಳ್ಳಲು ಸಾಕಷ್ಟು ಮನವೊಲಿಸಿದ್ದಳು. ಇದಕ್ಕೆ ಆತ ಒಪ್ಪದಿದ್ದಾಗ ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.