ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

LSG vs DC Match Preview | ಸೇಡು ತೀರಿಸಿಕೊಳ್ಳುತ್ತಾ ಡೆಲ್ಲಿ

Mahesh M Dhandu by Mahesh M Dhandu
May 1, 2022
in Newsbeat, Sports, ಕ್ರಿಕೆಟ್
lsg-vs-dc-match-preview- k l rahul vs rishab pant saaksha tv

lsg-vs-dc-match-preview- k l rahul vs rishab pant saaksha tv

Share on FacebookShare on TwitterShare on WhatsappShare on Telegram

LSG vs DC Match Preview | ಸೇಡು ತೀರಿಸಿಕೊಳ್ಳುತ್ತಾ ಡೆಲ್ಲಿ

ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ    ಇಂದು ಎರಡು ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.

Related posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

August 5, 2026
‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

August 5, 2026

ಇದು 15 ನೇ ಆವೃತ್ತಿಯ 45ನೇ ಪಂದ್ಯವಾಗಿದೆ. ಮುಂಬೈ ವಾಂಖೆಡೆ ಅಂಗಳದಲ್ಲಿ ಈ ಪಂದ್ಯ ನಡೆಯಲಿದೆ.

ಈ ಎರಡೂ ತಂಡಗಳು ಈ ಸೀಸನ್ ನಲ್ಲಿ ಎರಡನೇ ಬಾರಿ ಮುಖಾಮುಖಿಯಾಗುತ್ತಿವೆ.

ಮೊದಲ ಸೆಣಸಾಟದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಆರು ವಿಕೆಟ್ ಗಳಿಂದ ಗೆಲುವು ಸಾಧಿಸಿತ್ತು.  ಹೀಗಾಗಿ ಡೆಲ್ಲಿಗೆ ಇದು ಸೇಡಿನ ಸಮರವಾಗಿದೆ.

ಈ ಬಾರಿಯ ಐಪಿಎಲ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈವರೆಗೂ ಎಂಟು ಪಂದ್ಯಗಳನ್ನಾಡಿದ್ದು, ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

ನಾಲ್ಕು ಪಂದ್ಯಗಳಲ್ಲಿ ಸೋಲು ಕಂಡು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

ಇತ್ತ ರಾಹುಲ್ ನಾಯಕತ್ವದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ 9 ಪಂದ್ಯಗಳನ್ನಾಡಿದ್ದು, ಆರು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಮೂರು ಪಂದ್ಯಗಳಲ್ಲಿ ಸೋಲು ಕಂಡಿದೆ.

ಹೀಗಾಗಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

ರಿಷಬ್ ನೇತೃತ್ವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕಳೆದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೆಣಸಾಟ ನಡೆಸಿತ್ತು.

ಈ ಪಂದ್ಯದಲ್ಲಿ ಡೆಲ್ಲಿ ನಾಲ್ಕು ವಿಕೆಟ್ ಗಳಿಂದ ಜಯ ಸಾಧಿಸಿದ್ದು, ವಾರ್ನರ್ 42 ರನ್, ಕುಲ್ ದೀಪ್ 4 ವಿಕೆಟ್ ಪಡೆದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡ ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೆಣಸಿದ್ದು 20 ರನ್ ಗಳಲ್ಲಿ ಸೋಲು ಕಂಡಿತ್ತು.

lsg-vs-dc-match-preview- k l rahul vs rishab pant  saaksha tv

ಕ್ವಿಂಟನ್ ಡಿ ಕಾಕ್ 46 ರನ್ ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಸದ್ಯ ಉತ್ತಮ ಗೆಲುವಿನ ಲಯದಲ್ಲಿರುವ ಉಭಯ ತಂಡಗಳು ಇಂದಿನ ಪಂದ್ಯದಲ್ಲಿ ಗೆಲುವಿಗಾಗಿ ಗುದ್ದಾಟ ನಡೆಸಲಿವೆ.  

ಇಂದಿನ ಪಂದ್ಯ ಗೆದ್ದು ಪ್ಲೇ ಆಫ್ಸ್ ಗೆ ಹತ್ತಿರವಾಗೋದು ಉಭಯ ತಂಡಗಳ ಲೆಕ್ಕಾಚಾರವಾಗಿದೆ.

ತಂಡಗಳ ಬಲಾಬಲದ ವಿಚಾರಕ್ಕೆ ಬಂದರೇ

ಡೆಲ್ಲಿ ತಂಡದಲ್ಲಿ ಒಗ್ಗಟ್ಟಿನ ಆಟದ ಕೊರತೆ ಕಾಣುತ್ತಿದೆ. ಬ್ಯಾಟಿಂಗ್ ನಲ್ಲಿ ಆರಂಭಿಕರನ್ನೇ ತಂಡ ಹೆಚ್ಚು ನಂಬಿಕೊಂಡಿದೆ. ಮುಖ್ಯವಾಗಿ ಡೇವಿಡ್ ವಾರ್ನರ್ ಮಾತ್ರ ಡೆಲ್ಲಿ ಬ್ಯಾಟಿಂಗ್ ಶಕ್ತಿಯಾಗಿದ್ದಾರೆ. ಪೃಥ್ವಿ ಶಾ ಅಬ್ಬರ ಕೇವಲ ಒಂದೆಡೆರಡು ಪಂದ್ಯಗಳಿಗೆ ಸೀಮಿತವಾಗಿದೆ. ಮಿಡಲ್ ಆರ್ಡರ್ ನಲ್ಲಿ ನಾಯಕ ರಿಷಬ್ ಪಂತ್, ಮಿಚೆಲ್ ಮಾರ್ಷ್ ಬ್ಯಾಟ್ ಅಬ್ಬರಿಸುತ್ತಿಲ್ಲ. ಇದು ತಂಡದ ಹಿನ್ನಡೆಗೆ ಕಾರಣವಾಗುತ್ತಿದೆ. ಆದ್ರೆ ಪೊವೆಲ್ ಫಾರ್ಮ್ ಗೆ ಬಂದಿರೋದು ತಂಡಕ್ಕೆ ನೆಮ್ಮದಿ ತಂದಿದೆ. ಇನ್ನು ಲಲಿತ್ ಯಾದವ್, ಅಕ್ಷರ್ ಪಟೇಲ್, ಶರ್ದೂಲ್ ಠಾಕೂರ್ ರನ್ ಗಳಿಸಿದ್ರೂ ಪಂದ್ಯವನ್ನು ಗೆಲ್ಲಿಸಿಕೊಡುವಂತಹ ಆಟವಾಡುತ್ತಿಲ್ಲ.

ಬೌಲಿಂಗ್ ವಿಚಾರಕ್ಕೆ ಬಂದರೇ ಕುಲ್ ದೀಪ್ ಯಾದವ್ ತಂಡದ ಟ್ರಂಪ್ ಕಾರ್ಡ್ ಬೌಲರ್ ಆಗಿದ್ದಾರೆ. ಇವರಿಗೆ ಅಕ್ಷರ್ ಪಟೇಲ್ ಸಾಥ್ ನೀಡಬೇಕಿದೆ. ವೇಗದ ಬೌಲಿಂಗ್ ನಲ್ಲಿ ಮುಸ್ತಫಿಜೂರ್, ಚೇತನ್ ಸಕಾರಿಯಾ ವಿಕೆಟ್ ಬೇಟೆ ಶುರು ಮಾಡಿದ್ದು, ಶರ್ದೂಲ್ ಮಿಡಲ್ ಓವರ್ ಗಳಲ್ಲಿ ವಿಕೆಟ್ ಪಡೆಯಬೇಕಾಗಿದೆ.

ಇತ್ತ ಲಕ್ನೋ ಸೂಪರ್ ಜೈಂಟ್ಸ್ ವಿಚಾರಕ್ಕೆ ಬಂದ್ರೆ ಇಲ್ಲೂ ಮಿಡಲ್ ಆರ್ಡರ್ ಸಮಸ್ಯೆ ಕಾಡುತ್ತಿದೆ. ಆರಂಭಿಕರಾದ ಕೆ.ಎಲ್.ರಾಹುಲ್, ಕ್ವಿಂಟನ್ ಡಿ ಕಾಕ್ ಉತ್ತಮ ಫಾರ್ಮ್ ನಲ್ಲಿದ್ದಾರೆ. ಆದ್ರೆ ಮಿಡರ್ ಆರ್ಡರ್ ಬ್ಯಾಟರ್ ಗಳಿಂದ ಸ್ಥಿರ ಪ್ರದರ್ಶನ ಬರುತ್ತಿಲ್ಲ. ಮುಖ್ಯವಾಗಿ ಮಾರ್ಕಸ್ ಸ್ಟೋಯ್ನಿಸ್ ವೈಫಲ್ಯ ತಂಡಕ್ಕೆ ಮೈನಸ್ ಪಾಯಿಂಟ್ ಆಗಿದೆ. ಕೃನಾಲ್ ಪಾಂಡ್ಯ, ದೀಪಕ್ ಹೂಡಾ ಒಂದೆಡೆರಡು ಪಂದ್ಯಗಳಲ್ಲಿ ಮಿಂಚಿದ್ದಾರೆ. ಆದ್ರೆ ಅದನ್ನ ಮುಂದುವರೆಸಬೇಕಾಗಿದೆ. ಆಯುಷ್ ಬದೋನಿ ಕೂಡ ಮೊದಲಿನ ಟಚ್ ನಲ್ಲಿ ಕಾಣಿಸುತ್ತಿಲ್ಲ. ಜೇಸನ್ ಹೋಲ್ಡರ್ ಅವರಿಂದ ಕೂಡ ಆಲ್ ರೌಂಡರ್ ಆಟ ಬರಬೇಕಿದೆ. ಬೌಲಿಂಗ್ ನಲ್ಲಿ ಲಕ್ನೋ ತಂಡ ಬಲಿಷ್ಟವಾಗಿದೆ. ದುಷ್ಮಂತಾ ಚಮೀರಾ, ಮೊಹ್ನಿಸ್ ಖಾನ್, ಅವೇಶ್ ಖಾನ್ ವಿಕೆಟ್ ಪಡೆಯುತ್ತಿದ್ದಾರೆ. ಇವರಿಗೆ ಹೋಲ್ಡರ್, ಸ್ಟೋಯ್ನಿಸ್ ಸಾಥ್ ನೀಡಬೇಕಿದೆ. ರವಿ ಬಿಷ್ನೋಯಿ ದುಬಾರಿಯಾದ್ರೂ ವಿಕೆಟ್ ಪಡೆಯುತ್ತಿದ್ದಾರೆ.

lsg-vs-dc-match-preview- k l rahul vs rishab pant

Tags: #rishab pant#Saaksha TVk l rahulLSG vs DC
ShareTweetSendShare
Join us on:

Related Posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

by Shwetha
August 5, 2026
0

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತ-ಇಸ್ರೇಲ್ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಅತ್ಯುತ್ತಮ ಸ್ನೇಹಿತರಲ್ಲಿ ಒಬ್ಬರು ಎಂದು ಹೇಳಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

by Shwetha
August 5, 2026
0

ನೂತನ ಸಚಿವ ಸಂಪುಟ ರಚನೆಯ ಬಳಿಕ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲವು ಹಿರಿಯ ಶಾಸಕರ ಅಸಮಾಧಾನದ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ....

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram