ರಾಷ್ಟ್ರ ರಾಜಧಾನಿಯಲ್ಲಿ ತಪ್ಪಿದ ಭಾರಿ ಅನಾಹುತ
ನವದೆಹಲಿ: ಪೂರ್ವ ದೆಹಲಿಯ ಹೂವಿನ ಮಾರುಕಟ್ಟೆಯಲ್ಲಿ ಚೀಲ ಒಂದರಲ್ಲಿ ಬಾಂಬ್ ಪತ್ತೆಯಾಗಿದೆ. ಭಾರೀ ಜನಸಂದಣಿಯಿಂದ ಕೂಡಿದ್ದ ಗಾಜಿಪುರದ ಮಾರುಕಟ್ಟೆಯಲ್ಲಿ, ಬಾಂಬ ದೊರೆತಿದ್ದು, ಬಾಂಬ್ ನಿಷ್ಕ್ರೀಯ ದಳ ಇದನ್ನು ನಾಶಪಡಿಸಿದ್ದಾರೆ.
ಇಂದು ಬೆಳಿಗ್ಗೆ 9:30ರ ಸುಮಾರಿಗೆ ವ್ಯಕ್ತಿಯೊಬ್ಬ ಸ್ಕೂಟಿಯಲ್ಲಿ ಬಂದು ಹೂವು ಖರಿದಿಸಿ, ತಾನು ತಂದ ಬ್ಯಾಗ್ ನ್ನು ಅಲ್ಲಿಯೇ ಬಿಟ್ಟು ಹೋಗಿದ್ದಾನೆ. ಸ್ವಲ್ಪ ಸಮಯದ ನಂತರ ಅಂಗಡಿಗರು ಇದನ್ನು ಗಮನಿಸಿ ಪೊಲೀಸರಿಗೆ ಖರೆ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬ್ಯಾಗ್ ತೆರೆದಾಗ ಅದರಲ್ಲಿ ಐಇಡಿ ಬಾಂಬ್ ಇರುವುದು ಪತ್ತೆಯಾಗಿದೆ. ಇದರಿಂದ ಭಾರಿ ಅನಾಹುತವೊಂದು ತಪ್ಪಿದೆ.
ಸಧ್ಯ ಬಾಂಬ್ ನ್ನು ದೆಹಲಿ ಮತ್ತು ಉತ್ತರ ಪ್ರದೇಶದ ಗಡಿಯ ಸಮೀಪದಲ್ಲಿರುವ ಖಾಲಿ ಜಾಗದಲ್ಲಿ ಬಾಂಬ್ ನಿಕ್ಷ್ರೀಯ ದಳ ಸ್ಪೋಟಗೊಳಿಸಿದ್ದಾರೆ. ದೆಹಲಿ ಪೊಲೀಸರು ಮಾರುಕಟ್ಟೆಯನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.