ADVERTISEMENT
Sunday, April 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಈ ಮೂವರು ಆಟಗಾರರ ಮೇಲೆ ಲಕ್ನೋ ಫ್ರಾಂಚೈಸಿ ಕಣ್ಣು

Mahesh M Dhandu by Mahesh M Dhandu
December 17, 2021
in Newsbeat, Sports, ಕ್ರೀಡೆ
IPL Auction
Share on FacebookShare on TwitterShare on WhatsappShare on Telegram

ಈ ಮೂವರು ಆಟಗಾರರ ಮೇಲೆ ಲಕ್ನೋ ಫ್ರಾಂಚೈಸಿ ಕಣ್ಣು Lucknow saaksha tv

15 ನೇ ಆವೃತ್ತಿ ಇಂಡಿಯಲ್ ಪ್ರಿಮಿಯರ್ ಲೀಗ್ ಗಾಗಿ ಫ್ರಾಂಚೈಸಿಗಳು ತಯಾರಿ ಆರಂಭಿಸಿವೆ. ಮುಂದಿನ ಆವೃತ್ತಿಯಿಂದ ಐಪಿಎಲ್ ನಲ್ಲಿ ಹೊಸ ತಂಡಗಳು ಪಾಲ್ಗೊಳ್ಳುತ್ತಿರುವುದರಿಂದ ಟೂರ್ನಿ ಮತ್ತಷ್ಟು ರಸವತ್ತಾಗಲಿದೆ.  ಲಕ್ನೋ ಮತ್ತು ಅಹಮದಾಬಾದ್ ತಂಡಗಳು ಮುಂದಿನ ವರ್ಷದಿಂದ ಐಪಿಎಲ್ ಸಂಗ್ರಾಮಕ್ಕೆ ಧುಮುಕಲಿವೆ. ಈ ಎರಡೂ ಫ್ರಾಂಚೈಸಿಗಳ ಪೈಕಿ ಲಕ್ನೋ ತಂಡ ಹೆಚ್ಚು ಉತ್ಸಾಹದಲ್ಲಿರುವಂತೆ ಕಾಣುತ್ತಿವೆ.

Related posts

ದಿನ ಭವಿಷ್ಯ (04-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (05-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 5, 2026
ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

April 4, 2026

ಬಲಿಷ್ಠ ತಂಡವನ್ನು ಕಟ್ಟಬೇಕು ಅನ್ನೋ ಹಠಕ್ಕೆ ಬಿದ್ದಿರುವ ಲಕ್ನೋ ಸ್ಟಾರ್ ಆಟಗಾರರಿಗೆ ಮಣೆ ಹಾಕುತ್ತಿದೆ. ಅಲ್ಲದೇ ತಂಡ ಬ್ರ್ಯಾಂಡ್ ಹೆಚ್ಚಿಸುವ ಆಟಗಾರರ ಮೇಲೆ ಕಣ್ಣಿಟ್ಟಿದೆ. ಇದರ ಭಾಗವಾಗಿಯೇ ಸದ್ಯ ಟೀಂ ಇಂಡಿಯಾದಲ್ಲಿ ಮಿಂಚು ಹರಿಸುತ್ತಿರುವ ಕನ್ನಡಿಗ ಕೆ.ಎಲ್. ರಾಹುಲ್ ಅವರನ್ನು ಬುಟ್ಟಿಗೆ ಹಾಕಿಕೊಂಡಿದೆ. ಅಲ್ಲದೇ ರಾಹುಲ್ ಅವರಿಗೆ ತಂಡದ ನಾಯಕತ್ವ ವಹಿಸಿ ಬ್ರ್ಯಾಂಡ್ ಹೆಚ್ಚಿಸಿಕೊಳ್ಳಲು ಪ್ಲಾನ್ ಮಾಡುತ್ತಿದೆ.

ವರದಿಗಳ ಪ್ರಕಾರ ಕೆ.ಎಲ್ ರಾಹುಲ್ ಅವರನ್ನ ತಂಡದಲ್ಲಿ ಸೇರಿಸಿಕೊಳ್ಳಲು ಲಕ್ನೋ ಬರೋಬ್ಬರಿ 20 ಕೋಟಿ ವೆಚ್ಚಿಸಿದೆಯಂತೆ. ಇದು ಐಪಿಎಲ್ ಇತಿಹಾಸದಲ್ಲಿ ಆಟಗಾರನೊಬ್ಬ ಪಡೆಯುತ್ತಿರುವ ಅತ್ಯಂತ ದೊಡ್ಡ ಮೊತ್ತವಾಗಿದೆ. ಕೆ.ಎಲ್.ರಾಹುಲ್ ನೂರಕ್ಕೆ ನೂರಷ್ಟು ಲಕ್ನೋ ಫ್ರಾಂಚೈಸಿಯ ಕ್ಯಾಪ್ಟನ್ ಆಗೋದು ಪಕ್ಕಾ ಆಗಿದೆ.

Lucknow saaksha tv

ಇನ್ನು ಬಿಸಿಸಿಐ ನಿಯಮಗಳ ಪ್ರಕಾರ ಹೊಸ ತಂಡಗಳು ಮೆಗಾ ಹರಾಜಿಗೂ ಮುನ್ನ ನಾನ್ ರಿಟೈನ್ಡ್ ಆಟಗಾರರಲ್ಲಿ ಮೂವರನ್ನು ಆಯ್ಕೆ ಮಾಡಿಕೊಳ್ಳಬೇಕಾಗಿದೆ. ಅದರಂತೆ ಲಕ್ನೋ ಫ್ರಾಂಚೈಸಿ ಕೆ.ಎಲ್ ರಾಹುಲ್ ಅವರನ್ನ ಆಯ್ಕೆ ಮಾಡಿಕೊಂಡಿದ್ದು, ಇನ್ನುಳಿದ ಇಬ್ಬರು ಆಟಗಾರರ ಖರೀದಿಸುವತ್ತ ಗಮನಹರಿಸಿದೆ.

ಲಕ್ನೋ ತಂಡ ಡಿಸೆಂಬರ್ 25 ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸಬೇಕು ಮತ್ತು ವಿವರಗಳನ್ನು ಐಪಿಎಲ್ ಮಂಡಳಿಗೆ ಸಲ್ಲಿಸಬೇಕು. ಈ ಹಿನ್ನೆಲೆಯಲ್ಲಿ ಲಕ್ನೋ, ಕೆ ಎಲ್ ರಾಹುಲ್ ಜೊತೆಗೆ ಅಪ್ಘಾನ್ ನ ರಶೀದ್ ಖಾನ್ , ಯುವ ಆಟಗಾರ ಇಶಾನ್ ಕಿಶನ್ ಮೇಲೆ ಕಣ್ಣಿಟ್ಟಿದೆಯಂತೆ.

ರಶೀದ್ ಖಾನ್ ಹೈದರಾಬಾದ್ ತಂಡದಿಂದ ಹೊರಬಂದಿದ್ದು, ಮೆಗಾ ಹರಾಜಿಗೆ ಹೋಗಲು ನಿರ್ಧರಿಸಿದ್ದಾರೆ. ಆದ್ರೆ ಅವರನ್ನ ಲಕ್ನೋ ಫ್ರಾಂಚೈಸಿ ಬುಟ್ಟಿಗೆ ಹಾಕಿಕೊಳ್ಳಲು ಚಿಂತನೆ ನಡೆಸಿದೆಯಂತೆ. ರಶೀದ್ ಖಾನ್ ತಂಡದಲ್ಲಿದ್ದರೇ ಬ್ರ್ಯಾಂಡ್ ಕೂಡ ಹೆಚ್ಚಲಿದೆ. ಇನ್ನುಳಿದಂತೆ ಯುವ ಬ್ಯಾಟರ್ ಕಮ್ ವಿಕೆಟ್ ಕೀಪರ್ ಇಶಾನ್ ಕಿಶಾನ್ ಗೂ ಮಣೆ ಹಾಕಲು ಲಕ್ನೋ ಫ್ರಾಂಚೈಸಿ ನಿರ್ಧರಿಸಿದೆ.   

Tags: #Saaksha TVCricketk l rahulRashid Khan
ShareTweetSendShare
Join us on:

Related Posts

ದಿನ ಭವಿಷ್ಯ (04-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (05-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 5, 2026
0

ದಿನ ಭವಿಷ್ಯ: 05-04-2026 ಮೇಷ ರಾಶಿ ಇಂದಿನ ದಿನ ನಿಮಗೆ ಅತ್ಯಂತ ಉತ್ಸಾಹಭರಿತವಾಗಿರುತ್ತದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಪ್ರಾಮಾಣಿಕ ಶ್ರಮಕ್ಕೆ ತಕ್ಕ ಫಲ ಮತ್ತು ಮನ್ನಣೆ ಸಿಗಲಿದೆ....

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

by Shwetha
April 4, 2026
0

ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

by Shwetha
April 4, 2026
0

ರಾಜ್ಯ ಸರ್ಕಾರದ ಎಸ್ಎಸ್ಎಲ್ ಸಿ ಪರೀಕ್ಷೆಯ ತೃತೀಯ ಭಾಷೆ ನೀತಿಗೆ ಇದೀಗ ಹೊಸ ತಿರುವು ಸಿಕ್ಕಿದೆ. ಹತ್ತನೇ ತರಗತಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ...

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

by Shwetha
April 4, 2026
0

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯ ಕಾವೇರುತ್ತಿರುವ ಹೊತ್ತಿನಲ್ಲೇ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಕಳೆದ ಕೆಲವು ದಿನಗಳಿಂದ ಪ್ರಚಾರ ಕಣದಿಂದ ಅಂತರ ಕಾಯ್ದುಕೊಂಡಿದ್ದ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

by Shwetha
April 4, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ, ಭ್ರಷ್ಟಾಚಾರದ ಆರೋಪಗಳ ನಡುವೆಯೇ ಇದೀಗ ಕುಟುಂಬ ರಾಜಕಾರಣದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಜೆಡಿಎಸ್ ವಿರುದ್ಧ ಕುಟುಂಬ ರಾಜಕಾರಣದ ಟೀಕೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram