ಪ್ರವಾಸಿಗರ ಮೇಲೆ ಹುಚ್ಚು ನಾಯಿ ದಾಳಿ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಕೆಆರ್ಎಸ್ (KRS Brindavan) ಉತ್ತರ ಬೃಂದಾವನದಲ್ಲಿಯೇ ಈ ಘಟನೆ ನಡೆದಿದೆ. ಶ್ರೀರಂಗಪಟ್ಟಣ ತಾಲೂಕಿನ ಐತಿಹಾಸಿಕ ಕೆಆರ್ಎಸ್ ಬೃಂದಾವನಕ್ಕೆ ಪ್ರತಿ ದಿನ ಪ್ರವಾಸಿಗರು ಆಗಮಿಸಿರುತ್ತಾರೆ. ಉತ್ತರ ಬೃಂದಾವನದಲ್ಲಿ ಕಳೆದ ರಾತ್ರಿ ಹುಚ್ಚು ನಾಯಿ ಕಾಣಿಸಿಕೊಂಡಿದ್ದು, ಇದ್ದಕ್ಕಿದ್ದಂತೆ ಅವರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ.
ದಾಳಿಯಿಂದಾಗಿ ಐವರು ಪ್ರವಾಸಿಗರು ಗಾಯಗೊಂಡಿದ್ದು, ತಕ್ಷಣ ಎಚ್ಚೆತ್ತ ಭದ್ರತಾ ಸಿಬ್ಬಂದಿ ಹುಚ್ಚು ನಾಯಿಯನ್ನು ಸ್ಥಳದಿಂದ ಓಡಿಸಿದ್ದಾರೆ. ಘಟನೆಯಿಂದ ಪ್ರವಾಸಿಗರಲ್ಲಿ ಆತಂಕ ಮನೆ ಮಾಡಿದೆ. ಈ ನಿಟ್ಟಿನಲ್ಲಿ ಉತ್ತರ ಬೃಂದಾವನವನ್ನು ಬಂದ್ ಮಾಡಲಾಗಿದೆ. ನಾಯಿ ದಾಳಿಯಿಂದ ಗಾಯಗೊಂಡವರು ಮೈಸೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.