ತುಮಕೂರು: ಹುಚ್ಚು ನಾಯಿಯೊಂದು 10ಕ್ಕೂ ಅಧಿಕ ಜನರ ಮೇಲೆ ದಾಳಿ ನಡೆಸಿ ಗಾಯಗೊಳಿಸುರವ ಘಟನೆ ಜಿಲ್ಲೆಯ ಕೊರಟಗೆರೆ ಪಟ್ಟಣದಲ್ಲಿ ನಡೆದಿದೆ.
ಈ ನಾಯಿ ಸಿಕ್ಕ ಸಿಕ್ಕವರ ಮೇಲೆ ಸಿಕ್ಕ ಸಿಕ್ಕವರ ಮೇಲೆ ದಾಳಿ ನಡೆಸಿದೆ. ಘಟನೆಯಲ್ಲಿ ಓರ್ವ ವೃದ್ದೆಯ ಮುಖಕ್ಕೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ. ಹೀಗಾಗಿ ಸಾರ್ವಜನಿಕರು ರಸ್ತೆಗೆ ಇಳಿಯಲು ಭಯಪಡುತ್ತಿದ್ದಾರೆ. ಈ ನಾಯಿ ಸೆರೆ ಹಿಡಿಯಬೇಕೆಂದು ಪಟ್ಟಣ ಪಂಚಾಯತಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ನಾಯಿ ಕಡಿತಕ್ಕೊಳಗಾದವರಿಗೆ ಕೊರಟಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜೊತೆಗೆ ಗಂಭೀರ ಗಾಯಗೊಂಡಿರುವ ವೃದ್ದೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.