ತಂದೆ ಹೆಸರನ್ನು ಉಳಿಸುವ ಕೆಲಸ ಮಾಡುವೆ : ಮಧುಬಂಗಾರಪ್ಪ
ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಪುತ್ರ, ಮಾಜಿ ಶಾಸಕ ಮಧುಬಂಗಾರಪ್ಪ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಬಾವುಟ ಹಿಡಿದಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಧುಬಂಗಾರಪ್ಪ ಕಾಂಗ್ರೆಸ್ ಸೇರಿದ್ದು, ಕಾಂಗ್ರೆಸ್ ಪಕ್ಷಕ್ಕೆ ನನ್ನ ಶಕ್ತಿಯನ್ನೆಲ್ಲಾ ಧಾರೆಯೆರೆವೆ.
ತಂದೆ ಎಸ್. ಬಂಗಾರಪ್ಪ ಅವರ ಹೆಸರನ್ನು ಉಳಿಸುವಂತಹ ಕೆಲಸ ಮಾಡುವೆ’ ಎಂದು ಭರವಸೆ ನೀಡಿದರು.
ನನಗೆ ಇದ್ದದ್ದು ಒಂದೇ ಪಕ್ಷ. ಅದು ಬಂಗಾರಪ್ಪ ಪಕ್ಷ. ಅವರ ನೆರಳಿನಲ್ಲಿಯೇ ಬೆಳೆದೆ. ನನ್ನ ಮೇಲೆ ನಂಬಿಕೆ ಇಟ್ಟು, ಕಾಂಗ್ರೆಸ್ಗೆ ಬರ ಮಾಡಿಕೊಂಡಿರುವವರ ವಿಶ್ವಾಸ ಉಳಿಸುವಂತಹ ಕೆಲಸವನ್ನು ಮಾಡುತ್ತೇನೆ.
ಯಾವುದೇ ಹುದ್ದೆಯ ಆಕಾಂಕ್ಷಿಯಾಗಿ ಪಕ್ಷಕ್ಕೆ ಬಂದಿಲ್ಲ. ತಂದೆ ಹೆಸರಿಗಿಂತ ನನಗೆ ದೊಡ್ಡ ಹುದ್ದೆ ಇಲ್ಲ. ಯಾವ ಜವಾಬ್ದಾರಿ ಕೊಟ್ಟರೂ ನಿರ್ವಹಿಸುವೆ ಎಂದು ಹೇಳಿದರು.