ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸ್ಪಷ್ಟನೆ ಕೊಟ್ಟ ಮಧುಬಂಗಾರಪ್ಪ
ಶಿವಮೊಗ್ಗ : ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳು ರಾಜ್ಯ ರಾಜಕಾರಣದಲ್ಲಿ ಹರಿದಾಡುತ್ತಲೇ ಇವೆ. ಆದ್ರೆ ಈವರೆಗೂ ಮಧುಬಂಗಾರಪ್ಪ ಆಗಲಿ, ಕಾಂಗ್ರೆಸ್ ಮೂಲಗಳಾಗಲಿ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ. ಇದೀಗ ವಿಚಾರವಾಗಿ ಸ್ವತಃ ಮಧುಬಂಗಾರಪ್ಪ ಅವರೇ ಮಾತನಾಡಿದ್ದು, ಜಿಲ್ಲಾ ಪಂಚಾಯ್ತಿ ಚುನಾವಣೆಯ ಒಳಗೆ ದೃಢ ನಿರ್ಧಾರ ತೆಗೆದುಕೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ.
ಕಲ್ಲಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿಯೇ ಆ ದೃಢ ನಿರ್ಧಾರ ತೆಗೆದುಕೊಳ್ಳುತ್ತೇನೆ. ನನ್ನ ಹುಟ್ಟುಹಬ್ಬದ ವೇಳೆ ಕಾಂಗ್ರೆಸ್ ನಾಯಕರು ಶುಭ ಕೋರಿದ್ದು ವಿಶೇಷವಾಗಿತ್ತು. ನಾನು ಹುಟ್ಟುಹಬ್ಬದಿನದಂದು ಸುಳ್ಳು ಹೇಳೋದಿಲ್ಲ. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಜಿಲ್ಲಾ ಪಂಚಾಯ್ತಿ ಚುನಾವಣೆಯ ಒಳಗೆ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ತಿಳಿಸಿದರು.
ಇನ್ನು ಚುನಾವಣೆ ಸಂದರ್ಭದಲ್ಲಿ ಪಕ್ಷ ಬದಲಾವಣೆ ಮಾಡುವುದು ತಪ್ಪು, ಅದಕ್ಕೂ ಮುಂಚೆಯೇ ನನ್ನ ನಿರ್ಧಾರ ಪ್ರಕಟಿಸುತ್ತೇವೆ ಎಂದು ಜೆಡಿಎಸ್ ತೊರೆಯುವ ಬಗ್ಗೆ ಮಧುಬಂಗಾರಪ್ಪ ಸುಳಿವು ನೀಡಿದರು.