ಐಸಿಯು ನಲ್ಲಿ ಅಗ್ನಿ ಅಪಘಾತ 4 ನವಜಾತ ಶಿಶುಗಳ ಸಾವು
ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಐಸಿಯುನಲ್ಲಿದ್ದ ನಾಲ್ಕು ಮಕ್ಕಳು ಸಜೀವವಾಗಿ ಸಾವನ್ನಪ್ಪಿರುವ ದಾರುಣ ಘಟನೆ ಮಧ್ಯ ಪ್ರದೇಶದ ಭೂಪಾಲ್ ನಲ್ಲಿ ನಡೆದಿದೆ.
ಭೂಪಾಲ್ ನ ಕಮಲ ನೆಹರು ಮಕ್ಕಳ ಆಸ್ಪತ್ರೆಯ ಮೂರನೆ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಶಾರ್ಟ್ ಸರ್ಕೂಟ್ ನಿಂದಾಗಿ ಬೆಂಕ ಕಾಣಿಸಿಕೊಂಡಿದೆ ಎಂದು ಅಂದಾಜಿಸಲಾಗಿದೆ. ಈ ವೇಳೆ 40 ಮಕ್ಕಳು ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯ ಸಿಬ್ಬಂದಿ 36 ಮಕ್ಕಳನ್ನ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆನಾಲ್ಕು ಮಕ್ಕಳನ್ನ ಉಳಿಸಲು ಸಾಧ್ಯವಾಗಲಿಲ್ಲ .
ಘಟನೆ ನಡೆದ ಬೆನ್ನಲ್ಲೆ 12 ಅಗ್ನಿಶಾಮಕದಳದ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡಿವೆ. ಅಗ್ನಿ ಅಪಘಾತದಲ್ಲಿ ಮೃತಪಟ್ಟ ಮಕ್ಕಳ ಪೋಷಕರಿಗೆ ತಲಾ 4 ಲಕ್ಷ ರುಪಾಯಿಗಳ ಪರಿಹಾರ ಧನವನ್ನ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘೋಷಿಸಿದ್ದಾರೆ.