ಬೆಂಗಳೂರು: ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದ್ದು, ಕಮಲ್ ನಾಥ್ ಸರ್ಕಾರ ಬೀಳುವುದು ಬಹುತೇಕ ಖಚಿತವಾಗಿದೆ. ಈ ನಡುವೆ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರನ್ನು ಬಿಜೆಪಿ ನಾಯಕರು ಬೆಂಗಳೂರಿನ ರೆಸಾರ್ಟ್ ನಲ್ಲಿಟ್ಟಿದ್ದಾರೆ ಎಂದು ಸುದ್ದಿಯಾಗುತ್ತಿದ್ದಂತೆ ಕಾಂಗ್ರೆಸ್ ಕಟ್ಟಪ್ಪ ಡಿ.ಕೆ ಶಿವಕುಮಾರ್ ಅವರು ಅಖಾಡಕ್ಕೆ ಇಳಿದಿದ್ದಾರೆ. ಅಲ್ಲದೆ, ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರವನ್ನು ಉಳಿಸುವ ಕೆಲಸಕ್ಕೆ ಟ್ರಬಲ್ ಶೂಟರ್ ಮುಂದಾಗಿದ್ದಾರೆ. ಈ ಕುರಿತು ಇಂದು ಸುದ್ದಿಗಾರರ ಜೊತೆ ಮಾತನಾಡಿರುವ ಡಿ.ಕೆ. ಶಿವಕುಮಾರ್, “ಇದು ಪಕ್ಷದ ಆಂತರಿಕ ವಿಚಾರ. ಇದರಲ್ಲಿ ಬಿಜೆಪಿ ನಾಯಕರು ತಲೆಹಾಕುವ ಅಥವಾ ನಮ್ಮ ಶಾಸಕರಿಗೆ ರಕ್ಷಣೆ ನೀಡುವ ಅಗತ್ಯವಿಲ್ಲ. ನಮ್ಮ ಶಾಸಕರನ್ನು ನಾವು ನೋಡಿಕೊಳ್ಳುತ್ತೇವೆ. ಇನ್ನೂ ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ. ಶೀಘ್ರದಲ್ಲೇ ನಮ್ಮ ಅಸಮಾಧಾನಿತ ಶಾಸಕರನ್ನು ಸಂಪರ್ಕಿಸಿ ಮಾತನಾಡಿಸಲಾಗುವುದು ಮತ್ತು ಅವರ ಮನವೊಲಿಸಿ ಮತ್ತೆ ಪಕ್ಷಕ್ಕೆ ಕರೆತರಲಾಗುವುದು” ಎಂದು ತಿಳಿಸಿದ್ದಾರೆ.
49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!
49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ '99 ಸ್ಟೋರ್'! ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್ಲೈನ್ನಲ್ಲಿ ಊಟ ಆರ್ಡರ್...








