ವಿಜಯಪುರ : ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ. ಭೀಮಾತೀರದ ಮಹಾದೇವ ಸಾಹುಕಾರ್ ಭೈರಗೊಂಡ ಹಾಗೂ ಬಾಬುರಾಯ ಮೇಲೆ ಅಪರಿಚಿತ ಮೂವರು ಗುಂಡಿನ ದಾಳಿ ನಡೆಸಿದ್ದಾರೆ.
ಘಟನೆಯಲ್ಲಿ ಭೈರಗೊಂಡ ಸಹಚರ ಬಾಬುರಾಯ ಸಾವನ್ನಪ್ಪಿದ್ದು, ಮಹಾದೇವ ಭೈರಗೊಂಡ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ವಿಜಯಪುರದ ಅರಕೇರೆ ತಾಂಡ ಬಳಿಯಲ್ಲಿ ಮಹಾದೇವ ಭೈರಗೊಂಡ ಕಾರಿಗೆ ಟಿಪ್ಪರ್ ಲಾರಿಯಿಂದ ಡಿಕ್ಕಿ ಹೊಡೆದಿದೆ. ಹೀಗೆ ಡಿಕ್ಕಿ ಹೊಡೆದು ಕಾರು ಅಡ್ಡಗಟ್ಟಿದಂತ ಮೂವರು ಅಪರಿಜಿತರು ಏಕಾಏಕಿ ಗುಂಡಿನ ದಾಳಿಯನ್ನು ನಡೆಸಿದ್ದಾರೆ.
ದಾಳಿಯಲ್ಲಿ ಮಹಾದೇವ ಭೈರಗೊಂಡ ಗಾಯಗೊಂಡರೇ, ಅವರ ಸಹಚರ ಬಾಬುರಾಯ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ : ಮೈಸೂರು ಜಿಲ್ಲೆಯಲ್ಲಿ ಕೊರೊನಾ ಹೆಚ್ಚಾಗುವ ಸಾಧ್ಯತೆಗಳಿವೆ : ರೋಹಿಣಿ ಸಿಂಧೂರಿ
ಅಪರಿಚಿತರ ಗುಂಡಿನ ದಾಳಿಯಿಂದಾಗಿ ಮಹಾದೇವ ಭೈರಗೊಂಡನಿಗೆ ಮೂರು ಗುಂಡು ದೇಹಕ್ಕೆ ನಾಟಿದ್ದು, ಮಹಾದೇವ ಭೈರಗೊಂಡ ಅಂಗರಕ್ಷಕ ಕೂಡ ಗಾಯಗೊಂಡಿದ್ದಾರೆ.
ದಾಳಿಯ ಬಳಿಕ ಮಹಾದೇವ ಭೈರಗೊಂಡ ಅವರನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಸದ್ಯ ಚಿಕಿತ್ಸೆ ಮುಂದುವರಿದೆ.
ಆದ್ರೇ ಗುಂಡೇಟಿನಿಂದ ಅವರ ಆರೋಗ್ಯ ಗಂಭೀರ ಸ್ಥಿತಿಯನ್ನು ತಲುಪಿರುವುದಾಗಿ ತಿಳಿದು ಬಂದಿದೆ. ಇನ್ನು ಘಟನಾ ಸ್ಥಳಕ್ಕೆ ಚಡಚಳ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel