ತಿಪಟೂರಿನಲ್ಲಿ `ಮಹಾನಾಯಕ’ ಫ್ಲೆಕ್ಸ್ ಗೆ ಸಗಣಿ ಎರಚಿದ ಕಿಡಿಗೇಡಿಗಳು!
ತಿಪಟೂರು : ಖಾಸಗಿ ಚಾನೆಲ್ ನಲ್ಲಿ ಪ್ರಾಸರವಾಗುತ್ತಿರುವ ಮಹಾನಾಯಕ ಧಾರವಾಹಿಗೆ ರಾಜ್ಯದಾದ್ಯಂತ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಆದ್ರೆ ತಿಪಟೂರಿನ ಜಕ್ಕನಹಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜೀವನಾಧರಿತ ಮಹಾನಾಯಕ ಧಾರವಾಹಿಗೆ ಗ್ರಾಮಸ್ಥರು ಹಾಕಿದ್ದ ಫ್ಲೆಕ್ಸ್ ಗೆ ಕಿಡಿಗೇಡಿಗಳು ಸಗಣಿ ಎರಚಿ ಅವಮಾನಿಸಿದ್ದಾರೆ.
ಹೌದು..! ಮಹಾನಾಯಕ ಧಾರವಾಹಿ ರಾಜ್ಯದಾದ್ಯಂತ ಜನಮನ್ನಣೆ ಪಡೆಯುತ್ತಿದೆ. ಈ ಹಿನ್ನೆಲೆ ಅನೇಕ ಗ್ರಾಮಗಳಲ್ಲಿ ಮಹಾನಾಯಕ ಧಾರವಾಹಿಯ ಫ್ಲೆಕ್ಸ್ ಗಳು ರಾರಾಜಿಸುತ್ತಿವೆ.
ಕರ್ನಾಟಕ ರಾಜ್ಯಸಭಾ ಸ್ಥಾನಕ್ಕೆ ಆರ್ಎಸ್ಎಸ್ ಕಾರ್ಯಕರ್ತ ಕೆ.ನಾರಾಯಣ್ ಅವಿರೋಧವಾಗಿ ಆಯ್ಕೆ
ಅದರಂತೆ ಜಕ್ಕನಹಳ್ಳಿಯಲ್ಲಿ ಗ್ರಾಮಸ್ಥರು ಹಾಗೂ ತಾಲೂಕಿನ ದಲಿತಪರ ಸಂಘಟನೆಗಳ ಒಕ್ಕೂಟದವರು ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರವಿರುವ ಮಹಾನಾಯಕ ಧಾರವಾಹಿಯ ಫ್ಲೆಕ್ಸ್ ಹಾಕಿ ಗೌರವ ಸಮರ್ಪಿಸಿದ್ದರು.
ಆದರೆ ಕೆಲ ಕಿಡಿಗೇಡಿಗಳು ಫ್ಲೆಕ್ಸ್ ಗೆ ಸಗಣಿ ಎರಚಿ ಅಪಮಾನ ಮಾಡಿದ್ದಾರೆ. ಸದ್ಯ ಗ್ರಾಮಸ್ಥರು ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕ್ರಮ ಜರುಗಿಸುವಂತೆ ದಲಿತ ಪರ ಸಂಘಟನೆಗಳು ಮತ್ತು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel