Maharashtra – Belagavi Border Clash : ಮರಾಠಿ ಭಾಷಿಕ ಹಳ್ಳಿಗಳ ಸೇರ್ಪಡೆಗೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ನಿರ್ಣಯ
ಕರ್ನಾಟಕದ ಜೊತೆಗೆ ಬೆಳಗಾವಿ ವಿಚಾರದಲ್ಲಿ ಖ್ಯಾತೆ ತೆಗೆಯುತ್ತಲೇ ಇರುವ ಮಹಾರಾಷ್ಟ್ರ ಇದೀಗ ಕರ್ನಾಟಕದ ಬೆಳಗಾವಿ, ಕಾರವಾರ, ನಿಪ್ಪಾಣಿ, ಭಾಲ್ಕಿ, ಬೀದರ್ ನಗರಗಳನ್ನ ಒಳಗೊಂಡಂತೆ , 865 ಮರಾಠಿ ಭಾಷಿಕರ ಹಳ್ಳಿಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ಕಾನೂನಾತ್ಮ ಹೋರಾಟ ನಡೆಸುವ ನಿರ್ಣಯವನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ಇದನ್ನ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.
ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಈ ನಿರ್ಣಯ ಮಂಡಿಸಿದ್ದಾರೆ. ಕರ್ನಾಟಕ ವಿಧಾನಸಭೆಯಲ್ಲಿ ಇದೇ ವಿಷಯದ ಬಗ್ಗೆ ನಿರ್ಣಯ ಅಂಗೀಕರಿಸಲಾಗಿದೆ. ಕರ್ನಾಟಕವು ಉದ್ದೇಶಪೂರ್ವಕವಾಗಿ ಗಡಿ ಕದನಕ್ಕೆ ಉತ್ತೇಜನ ನೀಡಿದೆ ಎಂದು ನಿರ್ಣಯದಲ್ಲಿ ಆರೋಪಿಸಲಾಗಿದೆ.
ಬೆಳಗಾವಿ, ಕಾರವಾರ, ನಿಪ್ಪಾಣಿ, ಭಾಲ್ಕಿ, ಬೀದರ್ ನಗರ ಮತ್ತು 865 ಹಳ್ಳಿಗಳಲ್ಲಿರುವ ಮರಾಠಿ ಭಾಷಿಕರೊಂದಿಗೆ ಮಹಾರಾಷ್ಟ್ರ ಸರ್ಕಾರ ದೃಢವಾಗಿ ನಿಂತಿದೆ. ಕರ್ನಾಟಕದಲ್ಲಿರುವ ಮರಾಠಿ ಭಾಷಿಕ ಹಳ್ಳಿಗಳ ಇಂಚು ಭೂಮಿಯನ್ನೂ ಸೇರಿಸಿಕೊಳ್ಳಲು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಕಾನೂನುಬದ್ಧವಾಗಿ ಹೋರಾಟ ನಡೆಸಲಿದೆ ಎನ್ನುವ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ..
ಹೀಗಾಗಿ ಕರ್ನಾಟಕ ಸರ್ಕಾರದ ಮುಂದಿನ ನಡೆ ಬಗ್ಗೆ ಎಲ್ಲರ ಚಿತ್ತ ನೆಟ್ಟಿದೆ..
Maharashtra – Belagavi Border Clash – saakshatv