ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ – 18 MLA ಗಳಿಂದ ಪ್ರಮಾಣ ವಚನ…
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, ತಮ್ಮ ಹೊಸ ಸಂಪುಟದಲ್ಲಿ ಹಿಂದಿನ ಉದ್ಧವ್ ಠಾಕ್ರೆ ಸರ್ಕಾರದ ಶಿವಸೇನೆಯ ಎಲ್ಲಾ ಎಂಟು ಸಚಿವರನ್ನು ಉಳಿಸಿಕೊಂಡಿದ್ದಾರೆ. ಶಿವಸೇನೆಯ ಬಂಡಾಯ ಶಾಸಕ ತಾನಾಜಿ ಸಾವಂತ್ ಸಚಿವ ಸ್ಥಾನಕ್ಕೆ ಹೊಸ ಸೇರ್ಪಡೆ.
ಇಂದು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿಯ ಒಂಬತ್ತು ನಾಯಕರು ಮತ್ತು ಶಿವಸೇನೆಯ ಒಂಬತ್ತು ನಾಯಕರು 11:15 ರ ಸುಮಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಬಿಜೆಪಿಯಿಂದ ಮಂತ್ರಿಗಳು: ಚಂದ್ರಕಾಂತ್ ಪಾಟೀಲ್, ಸುಧೀರ್ ಮುಂಗಂಟಿವಾರ್, ಗಿರೀಶ್ ಮಹಾಜನ್, ಸುರೇಶ್ ಖಾಡೆ, ರಾಧಾಕೃಷ್ಣ ವಿಖೆ ಪಾಟೀಲ್, ರವೀಂದ್ರ ಚವ್ಹಾಣ್, ಮಂಗಲ್ ಪ್ರಭಾತ್ ಲೋಧಾ, ವಿಜಯಕುಮಾರ್ ಗಾವಿತ್ ಮತ್ತು ಅತುಲ್ ಸೇವ್.
ಶಿವಸೇನೆಯಿಂದ ಮಂತ್ರಿಗಳು: ದಾದಾ ಭೂಸೆ, ಶಂಭುರಾಜೇ ದೇಸಾಯಿ, ಸಂದೀಪನ್ ಬುಮ್ರೆ, ಉದಯ್ ಸಾಮಂತ್, ತಾನಾಜಿ ಸಾವಂತ್, ಅಬ್ದುಲ್ ಸತ್ತಾರ್, ದೀಪಕ್ ಕೇಸರ್ಕರ್, ಗುಲಾಬ್ರಾವ್ ಪಾಟೀಲ್ ಮತ್ತು ಸಂಜಯ್ ರಾಥೌಡ್.