ಕಲಬುರಗಿ : ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ವೀರ್ ಡ್ಯಾಮ್ ನಿಂದ ಕಲಬುರಗಿಯ ಭೀಮಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗಿದೆ. ಬರೋಬ್ಬರಿ 23 ಸಾವಿರ ಕ್ಯೂಸೆಕ್ ನೀರನ್ನು ವೀರ್ ಡ್ಯಾಮ್ ನಿಂದ ಭೀಮಾ ನದಿಗೆ ರಿಲೀಸ್ ಮಾಡಲಾಗುತ್ತಿದ್ದು, ಇನ್ನೂ ಒಳ ಹರಿವಿನ ಪ್ರಮಾಣದಲ್ಲಿ ಹೆಚ್ಚಾದಲ್ಲಿ ನದಿಪಾತ್ರದ ಗ್ರಾಮಗಳಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎನ್ನಲಾಗುತ್ತಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬನೀರು ಬಿಡುಗಡೆ ಮಾಡೆದ್ದೇ ಆದರೆ ನದಿತೀರದ ಗ್ರಾಮಗಳಿಗೆ ನೀಎರು ನುಗ್ಗಿ ಜಲಪ್ರಹಾಹ ಉಂಟಾಗುವುದರಲ್ಲಿ ಡೌಟೇ ಇಲ್ಲ. ಇತ್ತ ನದಿಗೆ ನೀರಿನ ಒಳ ಹರಿವು ಹೆಚ್ಚಾಗಿರೋದು ನದಿತಟದ ಗ್ರಾಮಸ್ಥರಲ್ಲಿ ಆತಂಕ ಹುಟ್ಟುಹಾಕಿದ್ದು, ಆತಂಕದ ದಿನಕಳೆಯುತ್ತಿದ್ದಾರೆ. ಇನ್ನೂ ನದಿಗೆ ನೀರು ಬಿಟ್ಟಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ
ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ...








