ಕಂಬಳ ಓಟದಲ್ಲಿ ದಾಖಲೆ ನಿರ್ಮಿಸಿರುವ ಶ್ರೀನಿವಾಸ ಗೌಡ ಅವರು ಸದ್ಯ ಟಾಕ್ ಆಪ್ ದಿ ಟೌನ್ ಆಗಿದ್ದಾರೆ. ಕಂಬಳದ ಓಟಗಾರ ಶ್ರೀನಿವಾಸ್ ಗೌಡರನ್ನು ಜಗದೇಕ ಓಟಗಾರ ಉಸೇನ್ ಬೋಲ್ಟ್ ಗೆ ಹೋಲಿಸಿ ಸಾಮಾಜಿಕ ಜಾಲ ತಾಣ, ಟಿವಿ ಮಾಧ್ಯಮಗಳಲ್ಲಿ ಹೊಗಳಲಾಗುತ್ತಿದೆ. ಶ್ರೀನಿವಾಸ್ ಗೌಡ ಓಟದ ಬಗ್ಗೆ ಬಂದಿರುವ ವರದಿಯನ್ನು ಉದ್ಯಮಿ ಆನಂದ್ ಮಹೀಂದ್ರಾ ಅವರು ಟ್ವೀಟ್ ಮಾಡಿದ್ದು, ಅವರ ಟ್ವೀಟ್ ಈಗ ಕ್ರೀಡಾ ಸಚಿವಾಲಯದ ಬಾಗಿಲು ತಟ್ಟಿದೆ. ಮಹೀದ್ರಾ ಅವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಕಿರಣ್ ರಿಜಿಜು, ಶ್ರೀನಿವಾಸ್ ಗೌಡ ಅವರನ್ನು ಕ್ರೀಡಾ ಪಾಧಿಕಾರಕ್ಕೆ ಬರುವಂತೆ ಆಹ್ವಾನಿಸಿದ್ದಾರೆ.
https://www.facebook.com/saakshatv/videos/587097295232427/
ಶ್ರೀನಿವಾಸ್ ಗೌಡ ಓಟದ ಬಗ್ಗೆ ಬಂದಿರುವ ವರದಿಯನ್ನು ಉಲ್ಲೇಖಿಸಿರುವ ಆನಂದ್ ಮಹೀಂದ್ರಾ, ಒಲಿಂಪಿಕ್ಸ್ ಗೆ ಕಂಬಳವನ್ನು ಸೇರಿಸಿ ಇಲ್ಲದಿದ್ದರೆ ಈತನಿಗೆ ಒಲಿಂಪಿಕ್ಸ್ ಗೆ ತೆರಳಲು ತರಬೇತಿ ಕೊಡಿ ಎಂದು ಕ್ರೀಡಾ ಸಚಿವ ಕಿರಣ್ ರಿಜಿಜುಗೆ ಟ್ಯಾಗ್ ಮಾಡಿ ಕೋರಿದ್ದರು.
ಆನಂದ್ ಮಹೀಂದ್ರಾ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು, ಭಾರತೀಯ ಕ್ರೀಡಾ ಪ್ರಾಧಿಕಾರದ ಕೋಚ್ ಗಳಿಗೆ ಶ್ರೀನಿವಾಸ ಗೌಡ ಅವರ ಟ್ರಯಲ್ ತೆಗೆದುಕೊಳ್ಳಲು ಸೂಚಿಸುತ್ತೇನೆ. ಅಥ್ಲೆಟಿಕ್ಸ್ ಅದರಲ್ಲೂ ಒಲಿಂಪಿಕ್ಸ್ ನ ಗುಣಮಟ್ಟ ಹಾಗೂ ಸೌಲಭ್ಯದ ಸರಿಯಾದ ಜ್ಞಾನ ಎಲ್ಲರಿಗೂ ಇರುವುದಿಲ್ಲ. ಭಾರತದ ಯಾವುದೇ ಪ್ರತಿಭೆಗಳು ಕತ್ತಲಲ್ಲಿ ಇರಲು ಬಿಡುವುದಿಲ್ಲ ಎಂದಿದ್ದಾರೆ.
Just one look at his physique & you know this man is capable of extraordinary athletic feats. Now either @KirenRijiju provides him training as a 100m sprinter or we get Kambala to become an Olympic event. Either way, we want a gold medal for Srinivasa! 😊 https://t.co/H3SBiOVSKr
— anand mahindra (@anandmahindra) February 15, 2020








