ಮೈಸೂರು: ಜಿಲ್ಲೆಯಲ್ಲಿ ಮಹಿಷಾ ದಸರಾ (Mahisha Dasara) ಆಚರಣೆ ಪರ, ವಿರೋಧಗಳ ಚರ್ಚೆ, ಪ್ರತಿಭಟನೆ ಜೋರಾಗುತ್ತಿವೆ. ಈ ಹಿನ್ನೆಲೆಯಲ್ಿಲ 144 ಸೆಕ್ಷನ್ ಜಾರಿ ಮಾಡಲಾಗಿದೆ.
ನಗರ ಪೊಲೀಸ್ ಆಯುಕ್ತರು ಸೆಕ್ಷನ್ 144 ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ. ಚಾಮುಂಡಿ ಬೆಟ್ಟ (Chamundi Hill) ಸೇರಿ (ಟೌನ್ ಹಾಲ್ ಹೊರತುಪಡಿಸಿ) ಮೈಸೂರು ನಗರದ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಪೊಲೀಸ್ ಕಮೀಷನರ್ ರಮೇಶ್.ಬಿ ಆದೇಶಿಸಿದ್ದಾರೆ. ಅ.12ರಂದು ಮಧ್ಯರಾತ್ರಿ 12 ಗಂಟೆಯಿಂದ ಅ.14ರ ಬೆಳಗ್ಗೆ 06 ಗಂಟೆಯವರೆಗೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ಈ ವೇಳೆ ಯಾವುದೇ ರ್ಯಾಲಿ, ಸಮಾರಂಭ ನಡೆಸುವಂತಿಲ್ಲ.
ಸಂಘಟನೆ ಅಥವಾ ಸಾರ್ವಜನಿಕರು ಈ ಆದೇಶವನ್ನು ಉಲ್ಲಂಘಿಸಿ ಸಭೆ-ಸಮಾರಂಭ ಮೆರವಣಿಗೆ, ಪ್ರತಿಭಟನೆ, ರ್ಯಾಲಿ ನಡೆಸಲು ಪ್ರಯತ್ನಿಸಿದಲ್ಲಿ ಅಲ್ಲಿ ಸೇರಿರುವ ಜನರ ಕೂಟ ಅಕ್ರಮ ಕೂಟವೆಂದು ಪರಿಗಣಿಸಿ, ಆದೇಶ ಉಲ್ಲಂಘನೆ ಕುರಿತಂತೆ ಕಾನೂನು ಕ್ರಮಕೈಗೊಳ್ಳಲಾಗುವುದು.