ಬಹುತೇಕ ಹೊಸ ಪ್ರತಿಭೆಗಳಿಂದಲೇ ಕೂಡಿರುವ ಸ್ಯಾಂಡಲ್ ವುಡ್ ನ ಹೊಸ ಚಿತ್ರ ಮಹಿಷಾಸುರ ಸದ್ಯದಲ್ಲಿಯೇ ಬಿಡುಗಡೆಯಾಗಲಿದೆ. ಮಳೇಕೋಟೆ ಮತ್ತು ಮೈತ್ರಿ ಪ್ರೊಡಕ್ಷನ್ ಸಂಸ್ಥೆ ಲಾಂಛನದಡಿ ತಯಾರಾಗಿರುವ ಮಹಿಷಾಸುರ ಚಿತ್ರದ ಟ್ರೈಲರ್ ಕೂಡ ಈಗಾಗಲೇ ರಿಲೀಸ್ ಆಗಿದ್ದು, ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದೆ. ನೈಜ ಘಟನೆಗಳ ಆಧಾರಿತ, ತ್ರಿಕೋನ ಪ್ರೇಮಕಥನ ಹೊಂದಿರುವ ಈ ಚಿತ್ರಕ್ಕೆ ಈಗಾಗಲೇ ಸೆನ್ಸಾರ್ ಮಂಡಳಿ ಯು /ಎ ಪ್ರಮಾಣ ಪತ್ರ ನೀಡಿದೆ.
ಕಳೆದ ಒಂದು ದಶಕದಿಂದ ಕನ್ನಡದ ಚಿತ್ರರಂಗದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಉದಯ್ ಪ್ರಸಾದ್ ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ಕಥೆ, ಚಿತ್ರಕಥೆಯ ಜವಾಬ್ದಾರಿಯನ್ನು ಸಹ ನಿಭಾಯಿಸುತ್ತಿದ್ದಾರೆ. “ ಮಹಿಷಾಸುರ”ನಿಗೆ ಲೀಲಾವತಿ ಸುರೇಶ್ ಕುಮಾರ್, ಪ್ರೇಮಾ ಚಂದ್ರಯ್ಯ, ನಾಗಸಂದ್ರ, ಮೈತ್ರಿ ಮಂಜುನಾಥ್ ಬಂಡವಾಳ ಹೂಡಿದ್ದಾರೆ.
ಇನ್ನೂ ಈ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಮಡಿರುವ ನಿರ್ದೇಶಕ ಉದಯ್ ಪ್ರಸನ್ನ ಅವರು “ಮಹಿಷಾಸುರ” ಚಿತ್ರ, ಕನ್ನಡ ಚಿತ್ರರಂಗದಲ್ಲೆ ಹೊಸ ಮೈಲಿಗಲ್ಲು ಸ್ಥಾಪಿಸಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಚಿತ್ರದಲ್ಲಿ ಅರ್ಜುನ್, ಬಿಂದುಶ್ರೀ, ಮಂಜು, ರಘು ಪಾಂಡೇಶ್ವರ, ರಾಕ್ ಲೈನ್ ಸುಧಾಕರ್, ಮಾಸ್ಟರ್ ತುಷಾರ್, ಮಾಸ್ಟರ್ ಸುಜಿತ್, ರವಿಚಂದ್ರ ಮುಂತಾದವರ ತಾರಾಬಳಗವಿದೆ. ಚಿತ್ರಕ್ಕೆ ಸುನಿಲ್ ಕೌಶಿಕ್, ಸಾಯಿಕಿರಣ್ ಸಂಗೀತವಿದ್ದು, ಕೃಷ್ಣ ಅವರ ಛಾಯಾಗ್ರಹಣವಿದೆ. ಉಳಿದಂತೆ ಹಿನ್ನೆಲೆ ಸಂಗೀತ ರಾಘವೇಂದ್ರ ವಿ, ಡಿವಿಡಿ ಸಂಕಲನ ವೆಂಕಿ, ರಾಕಿ ರಮೇಶ್ ಸಾಹಸ, ಸುಜಿತ್ ಕಿಶೋರ್ ನೃತ್ಯ ನಿರ್ದೇಶನದ ಜವಾಬ್ದಾರಿ ಹೊತ್ತಿದ್ರೆ, ವಿರಾಟ್ ರಾಜು ಅವರ ಸಂಭಾಷಣೆ ಚಿತ್ರಕ್ಕಿದೆ.