Mahrashtra Bus Accident: ಬಸ್ ಗೆ ಬೆಂಕಿ – 11 ಪ್ರಯಾಣಿಕರ ಸಜೀವ ದಹನ….
ಮಹಾರಾಷ್ಟ್ರದ ನಾಸಿಕ್ನಲ್ಲಿ ಇಂದು ಮುಂಜಾನೆ ಬಸ್ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ಹನ್ನೊಂದು ಜನರು ಸಾವನ್ನಪ್ಪಿದ್ದು, 38 ಜನರು ಗಾಯಗೊಂಡಿದ್ದಾರೆ.
ನಾಸಿಕ್ನ ಔರಂಗಾಬಾದ್ ರಸ್ತೆಯಲ್ಲಿ ಡೀಸೆಲ್ ಸಾಗಿಸುತ್ತಿದ್ದ ಟ್ರೈಲರ್ ಟ್ರಕ್ಗೆ ಡಿಕ್ಕಿ ಹೊಡೆದ ನಂತರ ಬಸ್ಗೆ ಬೆಂಕಿ ಹೊತ್ತಿಕೊಂಡಿದೆ.
“ಸಾವಿಗೀಡಾದವರಲ್ಲಿ ಹೆಚ್ಚಿನವರು ಸ್ಲೀಪರ್ ಕೋಚ್ ಬಸ್ನ ಪ್ರಯಾಣಿಕರಾಗಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ” ಎಂದು ನಾಸಿಕ್ನ ಉಪ ಪೊಲೀಸ್ ಆಯುಕ್ತ ಅಮೋಲ್ ತಾಂಬೆ ಹೇಳಿದ್ದಾರೆ. ಪ್ರಕರಣ ದಾಖಲಾಗಿದ್ದು, ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ ಅಪಘಾತವು ಮುಂಜಾನೆ 5.15 ರ ಸುಮಾರಿಗೆ ಸಂಭವಿಸಿದೆ. ಅಪಘಾತದಲ್ಲಿ ಸದಸ್ಯರನ್ನು ಕಳೆದುಕೊಂಡ ಕುಟುಂಬಗಳಿಗೆ ತಲಾ ₹ 2 ಲಕ್ಷ ಆರ್ಥಿಕ ನೆರವು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಗಾಯಗೊಂಡವರಿಗೆ ₹ 50,000 ನೀಡಲಾಗುವುದು.
ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಅಪಘಾತದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ತಲಾ ₹ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಮಹಾರಾಷ್ಟ್ರ ಸರ್ಕಾರ ಭರಿಸಲಿದೆ ಎಂದು ರಾಜ್ಯ ಸಚಿವ ದಾದಾ ಭೂಸೆ ಹೇಳಿದ್ದಾರೆ.
Mahrashtra Bus Accident : 11 Dead, 38 Injured As Bus Catches Fire In Maharashtra’s Nashik