ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ‘ಗೃಹಲಕ್ಷ್ಮಿ’ ಹಾಗೂ ‘ಗೃಹಜ್ಯೋತಿ’ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಮರುಪರಿಶೀಲಿಸಲು ಸರ್ಕಾರ ಮುಂದಾಗಿದೆ. ನಿನ್ನೆ ನಡೆದ SIR ಸಭೆಯಲ್ಲಿ ಈ ಕುರಿತು ಮಹತ್ವದ ಚರ್ಚೆ ನಡೆದಿದ್ದು, ಯೋಜನೆಗಳಲ್ಲಿ ಪಾರದರ್ಶಕತೆ ತರಲು ಸರ್ಕಾರ ಕಠಿಣ ಕ್ರಮಕ್ಕೆ ಸಿದ್ಧವಾಗಿದೆ.
ಕೇವಲ ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಸೌಲಭ್ಯಗಳು ತಲುಪುವಂತೆ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ. ಇದರ ಭಾಗವಾಗಿ, ಸದ್ಯ ಯೋಜನೆ ಪಡೆಯುತ್ತಿರುವವರ ಅರ್ಹತೆಯನ್ನು ಸಮಗ್ರವಾಗಿ ಮರುಪರಿಶೀಲನೆ ಮಾಡಲಾಗುತ್ತಿದೆ. ನಕಲಿ ದಾಖಲೆಗಳ ಮೂಲಕ ಅಥವಾ ಅನರ್ಹರಾಗಿದ್ದರೂ ಯೋಜನೆ ಪಡೆಯುತ್ತಿರುವವರನ್ನು ಗುರುತಿಸಿ ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇದೆ.
ಸರ್ಕಾರದ ಈ ಕ್ರಮದಿಂದ ನಿಜವಾದ ಅರ್ಹರಿಗೆ ಹೆಚ್ಚು ಪ್ರಯೋಜನ ಸಿಗಲಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಮತ್ತೊಂದೆಡೆ, ಸಾವಿರಾರು ಅನರ್ಹ ಕಾರ್ಡ್ದಾರರಿಗೆ ಗೃಹಲಕ್ಷ್ಮಿ & ಗೃಹಜ್ಯೋತಿ ಸೌಲಭ್ಯಗಳು ಬಂದ್ ಆಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.
ಈ ನಿರ್ಧಾರ ರಾಜ್ಯ ರಾಜಕೀಯದಲ್ಲೂ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರದ ಮುಂದಿನ ಕ್ರಮಗಳತ್ತ ಎಲ್ಲರ ಗಮನ ನೆಟ್ಟಿದೆ.








