ಬಾಗಲಕೋಟೆ : ಬಾಗಲಕೋಟೆಯಲ್ಲಿ ಮಹಾಮಳೆಗೆ ಮಲಪ್ರಭಾ ನದಿ ತುಂಬಿ ಹರಿಯುತ್ತಿದೆ. ನದಿ ಪಾತ್ರದ ಜನರಲ್ಲಿ ಇದೀಗ ಪ್ರವಾಹದ ಭೀತಿ ಎದುರಾಗಿದೆ. ನದಿತಟದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಡಂಗೂರ ಸಾರಿಸುವ ಚೊಳಚಗುಡ್ಡ ಗ್ರಾಮಸ್ಥರಲ್ಲಿ ಈ ಕುರಿತಾಗಿ ಜಾಗೃತಿ ಮೂಡಿಸಲಾಗಿದೆ. ಇನ್ನೂ ಮಲಪ್ರಭಾ ನದಿ ತಟದಲ್ಲಿರುವ ಚೊಳಚಗುಡ್ಡ ಗ್ರಾಮ ಕಳೆದ ವರ್ಷ ಸಂಭವಿಸಿದ್ದ ಪ್ರವಾಹದಲ್ಲೂ ತತ್ತರಿಸಿಹೋಗಿತ್ತು. ಕಳೆದ ವರ್ಷದ ಪ್ರವಾಹಕ್ಕೆ ತುತ್ತಾಗಿ ಅನೇಕ ಅನಾಹುತಗಳಿಗೆ ಸಾಕ್ಷಿಯಾಗಿತ್ತು. ಇದೀಗ ಮತ್ತೆ ಗ್ರಾಮದ ಜನರಲ್ಲು ಪ್ರವಾಹದ ಆತಂಕ ಮನೆಮಾಡಿದೆ.
ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್
ಬೆಂಗಳೂರು: ರಾಜಕಾರಣದಲ್ಲಿ ಕೆಲಸ ಆಗಬೇಕೆಂದರೆ ಸಾಮ, ದಾನ, ಭೇದ, ದಂಡ ಎಲ್ಲವನ್ನೂ ಬಳಸಬೇಕು ಎಂಬ ಮಾತಿದೆ. ಆದರೆ, ಹಾಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...








