ಬಾಗಲಕೋಟೆ : ಬಾಗಲಕೋಟೆಯಲ್ಲಿ ಮಹಾಮಳೆಗೆ ಮಲಪ್ರಭಾ ನದಿ ತುಂಬಿ ಹರಿಯುತ್ತಿದೆ. ನದಿ ಪಾತ್ರದ ಜನರಲ್ಲಿ ಇದೀಗ ಪ್ರವಾಹದ ಭೀತಿ ಎದುರಾಗಿದೆ. ನದಿತಟದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಡಂಗೂರ ಸಾರಿಸುವ ಚೊಳಚಗುಡ್ಡ ಗ್ರಾಮಸ್ಥರಲ್ಲಿ ಈ ಕುರಿತಾಗಿ ಜಾಗೃತಿ ಮೂಡಿಸಲಾಗಿದೆ. ಇನ್ನೂ ಮಲಪ್ರಭಾ ನದಿ ತಟದಲ್ಲಿರುವ ಚೊಳಚಗುಡ್ಡ ಗ್ರಾಮ ಕಳೆದ ವರ್ಷ ಸಂಭವಿಸಿದ್ದ ಪ್ರವಾಹದಲ್ಲೂ ತತ್ತರಿಸಿಹೋಗಿತ್ತು. ಕಳೆದ ವರ್ಷದ ಪ್ರವಾಹಕ್ಕೆ ತುತ್ತಾಗಿ ಅನೇಕ ಅನಾಹುತಗಳಿಗೆ ಸಾಕ್ಷಿಯಾಗಿತ್ತು. ಇದೀಗ ಮತ್ತೆ ಗ್ರಾಮದ ಜನರಲ್ಲು ಪ್ರವಾಹದ ಆತಂಕ ಮನೆಮಾಡಿದೆ.
ಸಚಿವ ಬಿ.ನಾಗೇಂದ್ರ ರಾಜೀನಾಮೆಗಾಗಿ ಹೋರಾಟ ಮುಂದುವರಿಕೆ, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ: ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು, ಸಚಿವ ಬಿ.ನಾಗೇಂದ್ರ ರಾಜೀನಾಮೆಗಾಗಿ ಹೋರಾಟ ಮುಂದುವರಿಸಲಿದ್ದು, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸದನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ...







