ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣದಲ್ಲಿ ನ್ಯಾಯಯುತ ತನಿಖೆ ನಡೆಯಬೇಕಾದರೆ, ನ್ಯಾಯ ದೊರಕಬೇಕಿದ್ದರೆ ನ್ಯಾಯಾಂಗ ತನಿಖೆ ನಡೆಸುವುದು ಉತ್ತಮವಾಗಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಹುದ್ದೆಯ ಅಧಿಕಾರಿಯೊಬ್ಬರು ಪ್ರಕರಣದ ತನಿಖೆ ನಡೆಸುವುದು ಕಷ್ಟಸಾಧ್ಯ. ಹೀಗಾಗಿ ಪಕ್ಷದ ರಾಜಕೀಯಗಳನ್ನು ಬದಿಗೊತ್ತಿ, ದಾಳಿಗೊಳಗಾದ ಶಾಸಕನಿಗೆ ರಕ್ಷಣೆ ನೀಡಬೇಕು. ಸರ್ಕಾರ ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸವನ್ನು ಮಾಡಬೇಕು ಎಂದು ಖರ್ಗೆ ಅವರು ಆಗ್ರಹಿಸಿದ್ದಾರೆ.
ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ
ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...








