ಕೋಲ್ಕತಾ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮನೆಯ ಆವರಣದಲ್ಲಿ ನಡೆದಾಡುತ್ತಿದ್ದ ಸಂದರ್ಭದಲ್ಲಿ ಆಯ ತಪ್ಪಿ ಬಿದ್ದು ಗಾಯ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಬಿದ್ದ ರಭಸಕ್ಕೆ ಮಮತಾ ಹಣೆಗೆ ಗಂಭೀರವಾದ ಗಾಯವಾಗಿದೆ.ಗಾಯದ ಪ್ರಮಾಣ ಹೆಚ್ಚಾಗಿರುವ ಕಾರಣ ಹಣೆಗೆ ಸ್ಟಿಚ್ ಮಾಡಲಾಗಿದೆ.
ಕಾಲಿಘಾಟ್ ನಿವಾಸದಲ್ಲಿ ನಡೆದಾಡುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಬಿದ್ದ ಮಮತಾ ಬ್ಯಾನರ್ಜಿ ಕಲ್ಲಿಗೆ ತಲೆ ಬಡಿದಿದೆ. ಹೀಗಾಗಿ ಹಣೆಯಲ್ಲಿ ತೀವ್ರ ಗಾಯವಾಗಿದೆ. ತಕ್ಷಣವೇ ಮಮತಾ ಬ್ಯಾನರ್ಜಿಯನ್ನು ಎಸ್ಎಸ್ಕೆಎಂ ಆಸ್ಪತ್ರೆಗೆ ದಾಖಲಿಸಿದ್ದಾರೆ. ರಕ್ತ ಸ್ರಾವವಾಗಿರುವ ಕಾರಣ ಮಮತಾ ಬ್ಯಾನರ್ಜಿ ಆಸ್ವಸ್ಥಗೊಂಡಿದ್ದಾರೆ. ಆದರೆ, ಜೀವಕ್ಕೆ ಯಾವುದೇ ಅಪಾಯ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.
ಘಟನೆ ಕುರಿತು ಟ್ವೀಟ್ ಮಾಡಿರುವ ತಮಿಳುನಾಡು ಸಿಎಂಎಂ ಸ್ಟಾಲಿನ್, ರಸ್ತೆ ಅಪಘಾತದ ಎಂದು ಉಲ್ಲೇಖಿಸಿದ್ದಾರೆ. ರಸ್ತೆ ಅಪಘಾತದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಾಯಗೊಂಡಿರುವ ಮಾಹಿತಿ ತಿಳಿದು ಆತಂಕವಾಗಿದೆ. ಮಮತಾ ಬ್ಯಾನರ್ಜಿ ಶೀಘ್ರ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ ಎಂದು ಸ್ಟಾಲಿನ್ ಹೇಳಿದ್ದಾರೆ.