ಚಿಕ್ಕಬಳ್ಳಾಪುರ: ತಾಯಿ ಹಾಗೂ ಸಹೋದರ ಬುದ್ಧಿವಾದ ಹೇಳಿದ್ದಕ್ಕೆ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಗಣೇಶ ಹಬ್ಬದ ಸಂದರ್ಭದಲ್ಲಿ ಡ್ಯಾನ್ಸ್ ಮಾಡಿಕೊಂಡು ಸಂಭ್ರಮದಲ್ಲಿದ್ದ ಯುವಕನಿಗೆ ಸಹೋದರ ಹಾಗೂ ತಾಯಿ ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಚಿಕ್ಕಪ್ಯಾಯಲಗುರ್ಕಿ ಗ್ರಾಮದಲ್ಲಿ ನಡೆದಿದೆ.
ಗಿರೀಶ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ಗಿರೀಶ್ ಗಣೇಶೋತ್ಸವದಲ್ಲಿ ಹಾಕಿದ್ದ ಹಾಡಿಗೆ ಡ್ಯಾನ್ಸ್ ಮಾಡುವುದನ್ನು ಇಷ್ಟು ಪಡುತ್ತಿದ್ದ. ಹೀಗಾಗಿ ಆತ ರಾತ್ರಿ 11 ಗಂಟೆಯಾದರೂ ಮನೆಗೆ ಬಂದಿರಲಿಲ್ಲ. ಇದರಿಂದ ಕೋಪಗೊಂಡ ತಾಯಿ ಹಾಗೂ ಸಹೋದರ ಬುದ್ಧ ಹೇಳಿದ್ದಾರೆ.
ಇದರಿಂದ ನೊಂದ ಗಿರೀಶ್ ಗ್ರಾಮದ ಹೊರವಲಯದ ಮುತ್ತುರಾಯಸ್ವಾಮಿ ದೇವಾಲಯದ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಳಿಗ್ಗೆ ಗ್ರಾಮಸ್ಥರು ಇದನ್ನು ಗಮನಿಸಿದ್ದಾರೆ. ಪೇರೇಸಂದ್ರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ದೂರು ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.








