ಬಳ್ಳಾರಿ: ಮೇಲ್ಛಾವಣಿ ಕುಸಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಲ್ಲದ ಸಿದ್ದಪ್ಪ (60) ಸಾವನ್ನಪ್ಪಿದ ದುರ್ದೈವಿಯಾಗಿದ್ದು, ಕೀರ್ತಿ, ಲಕ್ಷ್ಮೀ, ಮುತ್ತುರಾಜ್ ಗಾಯಗೊಂಡಿದ್ದಾರೆ.
ಮನೆಯವರೆಲ್ಲ ಕುಳಿತು ಊಟ ಮಾಡುತ್ತಿದ್ದ ಸಂದರ್ಭದಲ್ಲಿ ಮನೆಯ ಮೇಲ್ಛಾವಣಿ ಕುಸಿದಿದೆ. ಪರಿಣಾಮ ಎಲ್ಲರೂ ಮಣ್ಣಿನಲ್ಲಿ ಸಿಲುಕಿದ್ದಾರೆ. ಕೂಡಲೇ ಗಮನಿಸಿದ ಸ್ಥಳೀಯರು ರಕ್ಷಿಸಲು ಮುಂದಾಗಿದ್ದಾರೆ. ಆದರೆ, ಅಷ್ಟರಲ್ಲಿ ಸಿದ್ದಪ್ಪ ಸಾವನ್ನಪ್ಪಿದ್ದು, ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.