ಕಲಬುರಗಿ : ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ಧಾರಾಕಾರ ಮಳೆಯಾಗಿದೆ. ಭಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಈ ವೇಳೆ ಭಾರೀ ಮಳೆಯಿಂದ ಯಳಸಂಗಿ – ಹಡಲಗಿ ನಡುವಿನ ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದ್ದು, ನೀರಿನಲ್ಲಿ ವ್ಯಕ್ತಿಯೋರ್ವ ಕೊಚ್ಚಿ ಹೋದ ಪಘಟನೆ ನಡೆದಿದೆ. ಬಿಂದಿಗೆ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಮಾಡ್ತಿದ್ದ ವ್ಯಕ್ತಿಯೊಬ್ಬರು ಸ್ಥಳೀಯರ ಮಾತನ್ನು ಲೆಕ್ಕಿಸದೆ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲೇ ಸೈಕಲ್ ನಲ್ಲಿ ಹೊರಟಿದ್ದ ಪರಿಣಾಮ ಈ ಅನಾಹುತ ಸಂಭವಿಸಿದೆ. ಅದೃಷ್ಟವಶಾತ್ ಸ್ಥಳೀಯರು ಆತನನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯಲ್ಲಿ ನೂರಾರು ಕೋಟಿ ರೂಪಾಯಿ ಸೋರಿಕೆ ಮತ್ತು ದುರ್ಬಳಕೆಯಾಗಿರುವುದು ಪತ್ತೆಯಾಗಿದ್ದು, ಇದನ್ನು ತಡೆಯಲು ಸರ್ಕಾರ ಈಗ...








