ಶಿವಮೊಗ್ಗ: ಬಿಸಿಲಿನಿಂದ ಬಸವಳಿದ ಜನಕ್ಕೆ ಮಳೆರಾಯ ಕೊಂಚ ರಿಲೀಫ್ ನೀಡಿದ್ದಾನೆ. ಮಳೆಯಿಂದಾಗಿ ಮರ ಉರುಳಿ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ರಾಜ್ಯಾದ್ಯಂತ ಹಲವೆಡೆ ಭಾರೀ ಮಳೆಯಾಗುತ್ತಿದೆ. ಹೀಗಾಗಿ ಜನ -ಜೀವನ ಹಲವೆಡೆ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಮಲೆನಾಡು, ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವೆಡೆ ಭರ್ಜರಿ ಮಳೆಯಾಗಿದೆ.
ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತೊರೆಬೈಲು ಗ್ರಾಮದ ಹತ್ತಿರ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಭಾರೀ ಗಾಳಿ, ಮಳೆಗೆ ಅಕೇಶಿಯಾ ಮರ ಬಿದ್ದು ಜಯಂತ್ ಭಟ್(64) ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದ ವೃದ್ಧ ಕೋಣಂದೂರಿನಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದರು ಎನ್ನಲಾಗಿದೆ.