Mandya : ಸಕ್ಕರೆ ನಾಡು ಮಂಡ್ಯದಲ್ಲಿಂದು ಕೇಸರಿ ಕಹಳೆ…!!
ರಾಹುಲ್ ಗಾಂಧಿ , ಕಾಂಗ್ರೆಸ್ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಸೆಡ್ಡು ಹೊಡೆಯಲು , ಕಮಲ ಪಡೆಯು ಸಜ್ಜಾಗಿದೆ.. ಜನಸಂಕಲ್ಪ ಯಾತ್ರೆ ಮೂಲಕ ಬೃಹತ್ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿರುವ ಬಿಜೆಪಿ ಪಾಂಡವಪುರ ಹಾಗೂ ಮದ್ದೂರು ಕ್ಷೇತ್ರಗಳಲ್ಲಿ ಜನಸಂಕಲ್ಪ ಯಾತ್ರೆ ಆಯೋಜನೆ ಮಾಡಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ಸಿಪಿ ಉಮೇಶ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಪಾಂಡವಪುರ ಹಾಗೂ ಮದ್ದೂರು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಪ್ರಕಟಗೊಳ್ಳುವ ಸಾಧ್ಯತೆಯಿದೆ.
ಪಾಂಡವಪುರಕ್ಕೆ ಡಾ|| ಇಂದ್ರೇಶ್ ಹಾಗೂ ಮದ್ದೂರು ಕ್ಷೇತ್ರದ ಅಭ್ಯರ್ಥಿಯಾಗಿ ಎಸ್ಪಿ ಸ್ವಾಮಿ ಹೆಸರು ಘೋಷಣೆ ಸಾಧ್ಯತೆ ದಟ್ಟವಾಗಿದೆ.
ಸಂಭಾವ್ಯ ಅಭ್ಯರ್ಥಿಗಳ ಪರ ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾಗೂ ಮಾಜಿಸಿಎಂ ಬಿಎಸ್ ವೈ ಮತಬೇಟೆಗಿಳಿಯಲಿಯಲಿದ್ದಾರೆ..
ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಅವರು ಭಾಗಿಯಾಗಲಿದ್ದಾರೆ.
ಸಚಿವರಾದ ಕೆಸಿ ನಾರಾಯಣಗೌಡ, ಗೋಪಾಲಯ್ಯ ಸೇರಿದಂತೆ ಹಲವು ಸಚಿವರು ಭಾಗಿಯಾಗಲಿದ್ದಾರೆ.
ಪಾಂಡವಪುರ ಹಾಗೂ ಮದ್ದೂರು ಜನಸಂಕಲ್ಪ ಯಾತ್ರೆ ಹಿನ್ನೆಲೆ ಕೇಸರಿ ಮಯವಾಗಿದೆ..
ಕೇಸರಿ ಬಣ್ಣ ಬ್ಯಾನರ್ಸ್ ಬಂಟಿಂಗ್ಸ್ ರಸ್ತೆಯಲ್ಲಿ ರಾರಾಜಿಸುತ್ತಿವೆ..
ಪಾಂಡವಪುರದ ಪಾಂಡವ ಕ್ರೀಡಾಂಗಣ ಹಾಗೂ ಮದ್ದೂರು ತಾಲೂಕು ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗಿದೆ..
ಕ್ಷೇತ್ರವಾರು ಕಾರ್ಯಕ್ರಮಕ್ಕೆ
40 ಸಾವಿರ ಜನ ಸೇರುವ ನಿರೀಕ್ಷೆಯಿದೆ.
2:30ಕ್ಕೆ ಮದ್ದೂರಿನಲ್ಲಿ ನಡೆಯಲಿರುವ ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಭಾಗಿಯಾಗಲಿರುವ ಸಾಧ್ಯತೆಯಿದೆ.