ಮಂಡ್ಯ: ರಾಜ್ಯದ ಜೀವನಾಡಿ ಕಾವೇರಿ ನದಿಗೆ ಕಟ್ಟಲಾಗಿರುವ ಕೆಆರ್ಎಸ್ ಡ್ಯಾಂ ಉಳಿವಿಗೆ ಆಗ್ರಹಿಸಿ ಮಂಡ್ಯ ಜಿಲ್ಲೆ ಬಂದ್ಗೆ ಕೆಆರ್ಎಸ್ ಉಳಿಸಿ ಹೋರಾಟ ಸಮಿತಿ ನಿರ್ಣಯ ಕೈಗೊಂಡಿದೆ.
ಮಂಡ್ಯದ ಹಿಂದಿ ಭವನದಲ್ಲಿ ನಡೆದ ಸಭೆ ಕೆಆರ್ಎಸ್ ಉಳಿಸಿ ಹೋರಾಟ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ಸಭೆಯಲ್ಲಿ ರೈತ ಸಂಘ, ಪ್ರಗತಿಪರ ಹೋರಾಟಗಾರರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದರು. ಕೆಆರ್ಎಸ್ ಜಲಾಶಯ ಸುತ್ತಮುತ್ತಲಿನ 20ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಷೇಧಕ್ಕೆ ಆಗ್ರಹಿಸಿ ಬಂದ್ಗೆ ಕರೆ ನೀಡಲು ತೀರ್ಮಾನ ಮಾಡಲಾಗಿದೆ.
ಮುಂದಿನ ಸಭೆಯಲ್ಲಿ ಬಂದ್ ಯಾವಾಗ ಮಾಡಬೇಕು ಎಂಬುದರ ದಿನಾಂಕ ನಿಗಧಿಗೆ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ
ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...








