ಮಂಡ್ಯ: ರಾಜ್ಯದ ಜೀವನಾಡಿ ಕಾವೇರಿ ನದಿಗೆ ಕಟ್ಟಲಾಗಿರುವ ಕೆಆರ್ಎಸ್ ಡ್ಯಾಂ ಉಳಿವಿಗೆ ಆಗ್ರಹಿಸಿ ಮಂಡ್ಯ ಜಿಲ್ಲೆ ಬಂದ್ಗೆ ಕೆಆರ್ಎಸ್ ಉಳಿಸಿ ಹೋರಾಟ ಸಮಿತಿ ನಿರ್ಣಯ ಕೈಗೊಂಡಿದೆ.
ಮಂಡ್ಯದ ಹಿಂದಿ ಭವನದಲ್ಲಿ ನಡೆದ ಸಭೆ ಕೆಆರ್ಎಸ್ ಉಳಿಸಿ ಹೋರಾಟ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ಸಭೆಯಲ್ಲಿ ರೈತ ಸಂಘ, ಪ್ರಗತಿಪರ ಹೋರಾಟಗಾರರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದರು. ಕೆಆರ್ಎಸ್ ಜಲಾಶಯ ಸುತ್ತಮುತ್ತಲಿನ 20ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಷೇಧಕ್ಕೆ ಆಗ್ರಹಿಸಿ ಬಂದ್ಗೆ ಕರೆ ನೀಡಲು ತೀರ್ಮಾನ ಮಾಡಲಾಗಿದೆ.
ಮುಂದಿನ ಸಭೆಯಲ್ಲಿ ಬಂದ್ ಯಾವಾಗ ಮಾಡಬೇಕು ಎಂಬುದರ ದಿನಾಂಕ ನಿಗಧಿಗೆ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ
ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು
ಕನ್ನಡ ಚಿತ್ರರಂಗದ ವಿಭಿನ್ನ ಆಲೋಚನೆಗಳ ಸರದಾರ ರಿಯಲ್ ಸ್ಟಾರ್ ಉಪೇಂದ್ರ ಅವರು ಪ್ರಜಾಕೀಯ ಎಂಬ ಹೊಸ ರಾಜಕೀಯ ಕ್ರಾಂತಿಗೆ ನಾಂದಿ ಹಾಡಿದ್ದಾರೆ. ಪ್ರಜಾಕೀಯ ಪಕ್ಷ ಸ್ಥಾಪನೆಯಾದಾಗಿನಿಂದಲೂ ಎಲ್ಲರ...








