Mandya | ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ಭೀತಿ
ಮಂಡ್ಯ : ಕೆಆರ್ ಎಸ್ ಡ್ಯಾಂ ಒಳ ಹರಿವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಮುಂದುವರೆದಿದೆ.
ಸದ್ಯ ಕೆಆರ್ ಎಸ್ ಡ್ಯಾಂಗೆ ಒಳಹರಿವಿನ ಪ್ರಮಾಣ 72282 ಕ್ಯೂಸೆಕ್ ಗೆ ಏರಿಕೆಯಾಗಿದೆ.
ನಿನ್ನೆ ಬೆಳಿಗ್ಗೆ 50467 ಕ್ಯೂಸೆಕ್ ನೀರು ಹರಿದು ಬರ್ತಿತ್ತು.
ಹಾರಂಗಿ, ಹೇಮಾವತಿ ಡ್ಯಾಂನಿಂದ ಹೆಚ್ಚಿನ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಡ್ಯಾಂಗೆ ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ.
![Mandya Flood threat in Kaveri river role saaksha tv](http://saakshatv.com/wp-content/uploads/2022/07/kaveri-300x217.jpg)
ಸದ್ಯ ಡ್ಯಾಂನಿಂದ 72612 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ.
ಹೀಗಾಗಿ ನದಿ ಪಾತ್ರದ ಜಮೀನುಗಳಿಗೆ ನೀರು ನುಗ್ಗುತ್ತಿದೆ.
124.80 ಅಡಿ ಗರಿಷ್ಠ ಮಟ್ಟ ಸಂಗ್ರಹ ಸಾಮರ್ಥ್ಯ ಹೊಂದಿರುವ KRS ಡ್ಯಾಂನಲ್ಲಿ 122.56 ಅಡಿ ನೀರು ಸಂಗ್ರಹವಾಗಿದೆ.
ಮುಂಜಾಗೃತ ಕ್ರಮವಾಗಿ ಡ್ಯಾಂ ಭರ್ತಿಗೆ 2 ಅಡಿ ಬಾಕಿ ಇರುವಾಗಲೇ ನೀರು ಬಿಡುಗಡೆ ಮಾಡಲಾಗುತ್ತಿದೆ.