ಕೃಷ್ಣರಾಜಸಾಗರಕ್ಕೆ ಬಾಗಿನ ಅರ್ಪಿಸಿದ ಬೊಮ್ಮಾಯಿ Basavaraja bommai saaksha tv
ಮಂಡ್ಯ : ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇವತ್ತು ಬಾಗಿನ ಅರ್ಪಿಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಿಂದಗಿ-ಹಾನಗಲ್ ಉಪಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಉಪಚುನಾವಣೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗೆಲುವಿನ ರೀತಿಯಲ್ಲೇ ಸೋಲನ್ನು ಕೂಡ ಸವಾಲಾಗಿ ಸ್ವೀಕರಿಸುತ್ತೇವೆ ಎಂದು ಹೇಳಿದರು.
ಅಲ್ಲದೆ ಮುಂಬರುವ ಸಾರ್ವತ್ರಿಕ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ
ಇನ್ನು ಬಾಗಿನ ಅರ್ಪಿಸುವ ವೇಳೆಯಲ್ಲಿ ಮುಖ್ಯಮಂತ್ರಿಗಳಿಗೆ ಸಚಿವರಾದ ಗೋವಿಂದ ಕಾರಜೋಳ, ಮುನಿರತ್ನ, ನಾರಾಯಣಗೌಡ, ಸಂಸದೆ ಸುಮಲತಾ ಅಂಬರೀಶ್ , ಜನಪ್ರತಿನಿಧಿಗಳು ಸೇರಿದಂತೆ ಮತ್ತಿತರರು ಸಾಥ್ ನೀಡಿದ್ದರು.
ಅಂದಹಾಗೆ ಇಂದು ಪ್ರಕಟವಾದ ಹಾನಗಲ್ – ಸಿಂದಗಿ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ – ಬಿಜೆಪಿ ಒಂದೊ0ದು ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಹಾನಗಲ್ ನಲ್ಲಿ ಕಾಂಗ್ರೆಸ್ ಗೆದ್ದರೇ ಸಿಂದಗಿಯಲ್ಲಿ ಬಿಜೆಪಿ ಜಯ ಸಾಧಿಸಿದೆ.