Mandya : ಕರ್ತವ್ಯನಿರತ ಪೊಲೀಸರ ಮೇಲೆಯೇ ವ್ಯಕ್ತಿಗಳು ನಡುರಸ್ತೆಯಲ್ಲೇ ಹಲ್ಲೆಗೆ ಮುಂದಾಗಿದ್ದ ಘಟನೆ
ಮಂಡ್ಯದಲ್ಲಿ ನಡೆದಿದೆ.. ಮಾಸ್ಕ್, ಹೆಲ್ಮೆಟ್ ತಪಾಸಣೆ ವೇಳೆ ಪೊಲೀಸರೊಂದಿಗೆ ಕಿರಿಕ್ ಮಾಡಿಕೊಂಡಿರುವ ಇವರು ಪುಂಡಾಟ ಮೆರೆದಿದ್ದಾರೆ.. ಇನ್ನೂ ಇತ್ತೀಚೆಗೆ ಪದೇ ಪದೇ ಪೊಲೀಸರ ಮೇಲಿನ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ASI ಮೇಲೆ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿ ಕಿರಿಕ್ ,ಮಾಡಿದ್ದೂ ಅಲ್ದೇ ಹಲ್ಲೆ ನಡೆಸಿದ್ದಾನೆ… ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ ಈ ಘಟನೆ ನಡೆದಿದೆ.. ಪಾಂಡವಪುರ ಠಾಣೆಯ ASI ಮಹೇಶ್ ಪ್ರಭು ಎಂಬುವರ ಮೇಲೆ ಹಲ್ಲೆಗೆ ಯತ್ನ ನಡೆದಿದೆ.. ಮಾಸ್ಕ್ ಧರಿಸಿದ ಜನರಿಂದ ದಂಡ ವಸೂಲಿ ಮಾಡ್ತಿದ್ದ ವೇಳೆ ಈ ಘಟನೆ ನಡೆದಿದೆ..
ಶಾಂತಿ ನಗರದ ನಿವಾಸಿ ನಾಗೇಶ್ ಎಂಬುವನಿಂದ ASI ಮೇಲೆ ಹಲ್ಲೆಗೆ ಯತ್ನಿಸಲಾಗಿದೆ.. ಪಟ್ಟಣದ ರಾಜಾ ಮೆಡಿಕಲ್ ಬಳಿ ಮಾಸ್ಕ್ ಪೊಲೀಸರು ಕಾರ್ಯಚರಣೆ ನಡೆಸ್ತಿದ್ದ ವೇಳೆ ಈ ಘಟನೆ ನಡೆದಿದೆ.. ಆರೋಪಿ ನಾಗೇಶ್ ಮಾಸ್ಕ್ ಧರಿಸದೆ ಬಂದಿದ್ದರಿಂದ ದಂಡ ಕಟ್ಟುವಂತೆ ಪೊಲೀಸರು ಸೂಚಿಸಿದ್ದಕ್ಕೆ ಕಿರಿಕ್ ತೆಗೆದಿದ್ದಾನೆ.. ಅಲ್ಲದೇ ASI ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾನೆ. ಸಾರ್ವಜನಿಕ ಸ್ಥಳದಲ್ಲಿ ಪೊಲೀಸ್ ಅಧಿಕಾರಿಯ ಕಾಲರ್ ಹಿಡಿದು ಎಳೆದಾಡಿ ಹಲ್ಲೆಗೆ ಮುಂದಾಗಿದ್ದಾರೆ. ಇದೀಗ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಆರೋಪಿ ವಿರುದ್ದ ಪ್ರಕರಣ ದಾಖಲಾಗಿದೆ.. ಪಾಂಡವಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ..