Mandya | ಸಂಗಮಕ್ಕೆ ಪ್ರವಾಸಿಗರ ನಿರ್ಬಂಧ
ಮಂಡ್ಯ : ಕಾವೇರಿ ನದಿಯಲ್ಲಿ ಯುವಕ ಕೊಚ್ಚಿಹೋದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲೂಕು ಆಡಳಿತ ಎಚ್ಚೆತ್ತುಕೊಂಡಿದ್ದು, ಸಂಗಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧವೇರಿದೆ.
ಸಂಗಮ ರಸ್ತೆಯ ಆರಂಭದಲ್ಲೇ ಬ್ಯಾರಿಕೇಡ್ ಅಳವಡಿಸಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಸಂಗಮಕ್ಕೆ ಬರುತ್ತಿರುವ ಪ್ರವಾಸಿಗರನ್ನು ಬ್ಯಾರಿಕೇಟ್ ಬಳಿಯೇ ತಡೆಯುತ್ತಿರುವ ಪೊಲೀಸರು ವಾಪಸ್ ಕಳುಹಿಸುತ್ತಿದ್ದಾರೆ.
![Mandya Restriction of tourists to Sangam saaksha tv](http://saakshatv.com/wp-content/uploads/2022/07/mandya-300x160.jpg)
ಮಾಹಿತಿ :
ನದಿಯಲ್ಲಿ ಸ್ನಾನ ಮಾಡಲು ಹೋಗಿ ಯುವಕ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಮಂಡ್ಯದ ಸಂಗಮ ಬಳಿಯ ಕಾವೇರಿ ನದಿಯಲ್ಲಿ ನಡೆದಿದೆ.
26 ವರ್ಷದ ಅಶೋಕ್ ನದಿಯಲ್ಲಿ ಕೊಚ್ಚಿಹೋದ ಯುವಕನಾಗಿದ್ದು, ಈತ ಬೆಂಗಳೂರಿನ ಯಲಹಂಕ ನಿವಾಸಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಈತ ಕುಟುಂಬಸ್ಥರು, ಸ್ನೇಹಿತರೊಂದಿಗೆ ಸಂಗಮಕ್ಕೆ ಪೂಜೆಗಾಗಿ ಬಂದಿದ್ದರು. ಬೆಳಿಗ್ಗೆ ನದಿಯಲ್ಲಿ ಸ್ನಾನ ಮಾಡುವಾಗ ಯುವಕ ಕಾಲು ಜಾರಿ ನದಿಗೆ ಬಿದ್ದು, ನೀರನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ.