Mangaluru Blast : ಹೊಣೆ ಹೊತ್ತುಕೊಂಡ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಉಗ್ರ ಸಂಘಟನೆ…
ಮಂಗಳೂರಿನ ಆಟೋರಿಕ್ಷಾ ಸ್ಪೋಟ ಪ್ರಕರಣದ ಹೊಣೆಯನ್ನ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಎಂಬ ಉಗ್ರ ಸಂಘಟನೆ ಹೊತ್ತುಕೊಂಡಿದ್ದು, 10 ನೇ ಶತನಮಾನದಲ್ಲಿ ನಿರ್ಮಾಣವಾಗಿರುವ ಮಂಗಳೂರಿನ ಪ್ರಸಿದ್ಧ ಕದ್ರಿ ಮಂಜುನಾಥ ದೇವಸ್ಥಾನ ಉಗ್ರರ ಟಾರ್ಗೆ್ಟ್ ಆಗಿತ್ತು ಎಂಬ ಸ್ಪೋಟಕ ಮಾಹಿತಿ ತಿಳಿದುಬಂದಿದೆ.
‘ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್’ ಉಗ್ರ ಸಂಘಟನೆ ಪೋಸ್ಟ್ ಹಂಚಿಕೊಂಡಿದ್ದು, ಮೂಲವಾಗಿ ಕದ್ರಿ ದೇವಸ್ಥಾನದ ಮೇಲೆ ದಾಳಿ ನಡೆಸಲು ಯೋಜನೆ ರೂಪಿಸಲಾಗಿತ್ತು. ಆದರೆ, ಉದ್ದೇಶಿತ ಗುರಿ ತಲುಪುವ ಮೊದಲೇ ಬಾಂಬ್ ಸ್ಫೋಟಗೊಂಡಿದೆ ಎಂದು ಸಂಘಟನೆ ಹೇಳಿರುವುದು ಪೋಸ್ಟ್ ನಲ್ಲಿ ಕಂಡು ಬಂದಿದೆ.
ನ.23 ರಂದು ಪ್ರಕಟಿಸಲಾಗಿರುವ ಪೋಸ್ಟ್ ಜೊತೆ ಬಾಂಬ್ ದಾಳಿಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್’ನ ಎರಡು ಫೋಟೋಗಳನ್ನೂ ಕೂಡ ಅಪ್ಲೋಡ್ ಮಾಡಲಾಗಿದೆ. ಅಲ್ಲದೇ, ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ಬೆದರಿಕೆ ಹಾಕಿರುವುದು ಕಂಡು ಬಂದಿದೆ. ನಿಮ್ಮ ಸಂತೋಷವು ಅಲ್ಪಕಾಲಿಕವಾಗಿರುತ್ತದೆ ಮತ್ತು ನಿಮ್ಮ ದಬ್ಬಾಳಿಕೆಯ ಫಲವನ್ನು ನೀವು ಅನುಭವಿಸುತ್ತೀರಿ ಎಂದು ಹೇಳಿದೆ.
Mangaluru Blast: Islamic Resistance Council claimed responsibility…