ಬೆಂಗಳೂರು: ಚಿಕಿತ್ಸೆಗೆ ಹೋಗಿದ್ದ ವೇಳೆ ಮಾಂಗಲ್ಯ ಸರ ಕಳ್ಳತನವಾಗಿರುವ ಘಟನೆ ನಡೆದಿದೆ.
ಮಹಿಳೆಯೊಬ್ಬರು ಎದೆ ನೋವು ಎಂದು ಆಸ್ಪತ್ರೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಅವರ ಮಾಂಗಲ್ಯ ಸರ ಕಳ್ಳತನವಾಗಿದೆ. ಕಳ್ಳತನದ ಹಿಂದೆ ಆಸ್ಪತ್ರೆ ಸಿಬ್ಬಂದಿ ಕೈವಾಡ ಇರುವ ಕುರಿತು ಶಂಕೆ ವ್ಯಕ್ತಪಡಿಸಿ ಮಹಿಳೆ ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ರಾಧಾ ಎಂಬುವವರೇ ಮಾಂಗಲ್ಯ ಸರ ಕಳೆದುಕೊಂಡವರು. ಎದೆ ನೋವು ಇದ್ದ ಕಾರಣ ಇಸಿಜಿ ಮಾಡಬೇಕು ಚಿನ್ನದ ಸರ ತಗೆದು ಇಡುವಂತೆ ನರ್ಸ್ ಅಕ್ಷತಾ ಸೂಚಿಸಿದ್ದಾರೆ. ಮಾಂಗಲ್ಯ ಸರ ತೆಗೆದ ನಂತರ ಪತಿಗೆ ಕೊಡಲು ಮಹಿಳೆ ಸೂಚಿಸಿದ್ದಾರೆ.
ಆದರೆ, ನರ್ಸ್ ದಿಂಬಿನ ಕೆಳಗೆ ಇಡುವಂತೆ ಸೂಚಿಸಿದ್ದಾರೆ. ಹೀಗಾಗಿ ಮಹಿಳೆ ಸರ ಮರೆತು ಹೋಗಿದ್ದಾರೆ. ರಾಧಾ ಅವರಿಗೆ ಮಾತ್ರೆ ಇಂಜೆಕ್ಷನ್ ಕೊಟ್ಟಿದ್ದ ಕಾರಣ ಮಾಂಗಲ್ಯ ಸರ ಆಸ್ಪತ್ರೆಯಲ್ಲಿ ಬಿಟ್ಟಿರುವುದನ್ನು ಮರೆತು ನಿದ್ದೆ ಮಾಡಿದ್ದಾರೆ. ಮಾರನೇ ದಿನ ಸ್ನಾನಕ್ಕೆ ಹೋದಾಗ ಈ ಬಗ್ಗೆ ಅರಿವಾಗಿದೆ. ಕೂಡಲೇ ಆಸ್ಪತ್ರೆಗೆ ಹೋಗಿ ವಿತಾರಿಸಿದಾಗ ಸಿಬ್ಬಂದಿ ಸರಿಯಾಗಿ ಸ್ಪಂದಿಸಿಲ್ಲ. ಹೀಗಾಗಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.