Mangli : ಕಾರಿನ ಮೇಲೆ ಕಲ್ಲು ತೂರಾಟವಾಗಿಲ್ಲ – ಸುಳ್ಳು ಸುದ್ದಿ ಹಬ್ಬಿಸಿ ಇಮೇಜ್ ಹಾಳು ಮಾಡಬೇಡಿ…
ಜನವರಿ 22 ರಂದು ಬಳ್ಳಾರಿ ಉತ್ಸವದಲ್ಲಿ ನಡೆದಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಗಾಯಕಿ ಮಂಗ್ಲಿ ಕೂಡ ಭಾಗಿಯಾಗಿದ್ದರು.. ಆದ್ರೆ ಅವರು ವಾಪಸ್ಸಾಗುವಾಗ ಅವರ ಕಾರಿನ ಮೇಲೆ ಕೆಲ ಕಿಡಿಗೇಡಿಗಳು ಕಲ್ಲು ತೂರಿದ್ದಾರೆಂಬ ಸುದ್ದಿ ಸಖತ್ ವೈರಲ್ ಆಗಿತ್ತು.
ಕಿಡಿಗೇಡಿಗಳು ಮಂಗ್ಲಿಗೆ ಮುತ್ತಿಗೆ ಹಾಕಿ, ಕಲ್ಲು ತೂರಾಟ ಮಾಡಿದರು ಎಂದು ಹೇಳಲಾಗಿತ್ತು. ಅಷ್ಟೇ ಅಲ್ದೇ ಪೊಲೀಸರು ಲಾಠಿಚಾರ್ಜ್ ಕೂಡ ಮಾಡಿದರು ಎನ್ನುವ ಸುದ್ದಿ ಹರಿದಾಡಿತ್ತು. ಆದ್ರೆ ಈ ಬಗ್ಗೆ ಖುದ್ದು ಮಂಗ್ಲಿ ಸ್ಪಷ್ಟನೆ ನೀಡಿದ್ದು , ನನ್ನ ಕಾರಿನ ಮೇಲೆ ಕಲ್ಲು ತೂರಾಟವಾಗಿಲ್ಲ , ನನ್ನ ಇಮೇಜ್ ಹಾಳು ಮಾಡುವ ಪ್ರಯತ್ನ ಮಾಡಬೇಡಿ ಈ ಸುದ್ದಿ ಸುಳ್ಳು ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಮಂಗ್ಲಿ , ನನ್ನ ಕಾರಿನ ಮೇಲೆ ಕಲ್ಲು ತೂರಾಟ ಮಾಡಲಾಗಿದೆ ಎನ್ನುವುದು ಸುಳ್ಳು. ಅದೊಂದು ಗಾಳಿಸುದ್ದಿ. ಆ ರೀತಿಯ ಘಟನೆ ಆಗಿಲ್ಲ. ನನ್ನ ಇಮೇಜ್ ಹಾಳು ಮಾಡಲು ಈ ರೀತಿ ಸುದ್ದಿ ಹಬ್ಬಿಸಿದ್ದಾರೆ. ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಪೊಲೀಸ್ ಇಲಾಖೆ ನನ್ನನ್ನು ಗೌರವಯುತವಾಗಿ ನೋಡಿಕೊಂಡಿದೆ. ಲಾಠಿಚಾರ್ಜ್ ಕೂಡ ಆಗಿಲ್ಲ. ಈ ರೀತಿಯ ಸುಳ್ಳು ಸುದ್ದಿಯನ್ನು ಹಬ್ಬಿಸಬೇಡಿ ಎಂದು ಹೇಳಿದ್ದಾರೆ.
ಕಾರಿನ ಗಾಜು ಒಡೆದಿರುವುದಕ್ಕೆ ಬಳ್ಳಾರಿ ಎಸ್ಪಿ ರಂಜಿತಕುಮಾರ್ ಬಂಡಾರ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು , ಕಾರಿನ ಮೇಲೆ ಯಾವುದೋ ಒಂದು ವಸ್ತು ಬಿದ್ದಿರುವ ಕಾರಣಕ್ಕಾಗಿ ಗಾಜು ಒಡೆದಿದೆ. ಅವರ ಕಾರಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ ಎನ್ನುವುದು ಸುಳ್ಳು ಸುದ್ದಿ. ಆ ರೀತಿಯ ಘಟನೆ ಆಗಿಲ್ಲ. ಪೊಲೀಸರು ಮತ್ತು ಅಭಿಮಾನಿಗಳ ನಡುವೆ ಯಾವುದೇ ವಾಗ್ವಾದ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
Mangli : No stone pelting on the car – don’t spoil the image by spreading fake news…