ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೆಡೆ ವರುಣಾರ್ಭಟ ಜೋರಾಗಿದೆ. ಇತ್ತ ದಿನೇ ದಿನೇ ಕೊರೊನಾ ಹಾವಳಿ ಹೆಚ್ಚಾಗುತ್ತಲೇ ಇದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸ್ಫೋಟವಾಗಿದ್ದು, ಒಂದೇ ದಿನ 194 ಮಂದಿಗೆ ಕೊರೋನಾ ಪಾಸಿಟಿವ್ ಇರುವುದು ದೃಢವಾಗಿದೆ. ಜಿಲ್ಲೆಯಲ್ಲಿ ಇಂದು ಒಟ್ಟು 6 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಇನ್ನೂ ಮೃತಪಟ್ಟಿರುವ 6 ಮಂದಿಯೂ ಸಹ ಮಂಗಳೂರು ನಗರದ ನಿವಾಸಿಗಳೇ ಆಗಿದ್ದಾರೆ. ಈ ಮೂಲಕ ಕೊರೋನಾಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 214ಕ್ಕೆ ಏರಿಕೆಯಾಗಿದೆ. ಇಂದು ಮಂಗಳೂರು ತಾಲೂಕಿನ 129 ಮಂದಿಗೆ ಇಂದು ಕೊರೋನಾ ಪಾಸಿಟಿವ್ ಬಂದಿದೆ, ಇದರ ಹೊರತಾಗಿ ಬೆಳ್ತಂಗಡಿಯ 16, ಪುತ್ತೂರಿನ 16, ಬಂಟ್ವಾಳದ 15, ಸುಳ್ಯದ 7 ಹಾಗೂ ಹೊರ ಜಿಲ್ಲೆಯಿಂದ ಬಂದ 11 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದೆ. ILI ಪ್ರಕರಣದಲ್ಲಿ 98, ಸಂಪರ್ಕವೇ ಪತ್ತೆಯಾಗದ 69, ಪ್ರಾಥಮಿಕ ಸಂಪರ್ಕದಿಂದ 15, SARI ಪ್ರಕರಣದಿಂದ 12 ಮಂದಿಗೆ ಇಂದು ಕೊರೋನಾ ಪಾಸಿಟಿವ್ ಇರುವುದು ದೃಢವಾಗಿದೆ. ಜಿಲ್ಲೆಯಲ್ಲಿ ಈವರೆಗೂ ಒಟ್ಟು 7,075 ಮಂದಿಗೆ ಸೋಂಕು ತಗುಲಿರುವು ದೃಢವಾಗಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿದೆ.
ಟಿಕೆಟ್ ಕೊಡಿಸುವುದಾಗಿ 2.5 ಕೋಟಿ ರೂ. ವಂಚನೆ; ಕೇಂದ್ರ ಸಚಿವರ ಸಹೋದರ ಅರೆಸ್ಟ್
ಹುಬ್ಬಳ್ಳಿ: ಲೋಕಸಭೆ ಚುನಾವಣೆಯಲ್ಲಿ (Loksabha Election) ಬಿಜೆಪಿ ಟಿಕೆಟ್ ಕೊಡಿಸುವುದಾಗಿ 2.25 ಕೋಟಿ ರೂ. ಸುಲಿಗೆ ಮಾಡಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad...