ಮದ್ಯ ನೀತಿ ಹಗರಣ – CBI ವಿಚಾರಣೆ ಎದುರಿಸಿದ ದೆಹಲಿ ಉಪಮುಖ್ಯಮಂತ್ರಿ
ದೆಹಲಿಯಲ್ಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನ ಸಿಬಿಐ ವಿಚಾರಣೆ ನಡೆಸುತ್ತಿದೆ. ಬೆಳಿಗ್ಗೆ 11.15 ಕ್ಕೆ ಸಿಬಿಐ ಕಚೇರಿ ತಲುಪಿದ ಸಿಸೋಡಿಯಾ ಅವರನ್ನ ಭ್ರಷ್ಟಾಚಾರ ನಿಗ್ರಹ ದಳದ ಮೊದಲನೆ ಮಹಡಿಯಲ್ಲಿ ವಿಚಾರಣೆ ನಡೆಸಲಾಯಿತು.
ಸಿಬಿಐ ಅಧಿಕಾರಿಗಳ ಪ್ರಕಾರ, ಎಫ್ಐಆರ್ನಲ್ಲಿ ಹೆಸರಿಸಲಾದ ಇತರ ಆರೋಪಿಗಳೊಂದಿಗೆ ಅವರ ಸಂಬಂಧ ಕಾರ್ಯಾಚರಣೆಯ ಸಮಯದಲ್ಲಿ ಪತ್ತೆಯಾದ ದಾಖಲೆಗಳ ಸಿಬಿಐ ಪ್ರಶ್ನೆ ಮಾಡಲಿದೆ.
ವಿಚಾರಣೆ ಆರಂಭವಾಗುತ್ತಿದ್ದಂತೆಯೇ ಟ್ವೀಟ್ ಮಾಡಿರುವ ಕೇಜ್ರಿವಾಲ್, ಗುಜರಾತ್ ಚುನಾವಣೆ ಫಲಿತಾಂಶ ಡಿಸೆಂಬರ್ 8 ರಂದು ಹೊರಬೀಳಲಿದೆ. ಈ ಜನ ಅಲ್ಲಿಯವರೆಗೂ ಮನೀಶ್ನನ್ನು ಜೈಲಿನಲ್ಲಿಡುತ್ತಾರೆ. ಇದರಿಂದ ಮನೀಶ್ ಗುಜರಾತ್ ಗೆ ಪ್ರಚಾರಕ್ಕೆ ಹೋಗಲಾಗುವುದಿಲ್ಲ ಎಂದಿದ್ದಾರೆ.
ಮತ್ತೊಂದೆಡೆ, ಸಿಬಿಐ ಕಚೇರಿಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ಎಎಪಿ ಮುಖಂಡರನ್ನು ದೆಹಲಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತ ನಾಯಕರಲ್ಲಿ ಸಂಸದ ಸಂಜಯ್ ಸಿಂಗ್ ಕೂಡ ಸೇರಿದ್ದಾರೆ.
Manish Sisodia: Liquor Policy Scam – Delhi Deputy Chief Minister faces CBI inquiry